Advertisement

ಕಾಂಗ್ರೆಸ್ ಪಕ್ಷದ ಕಥೆ ಮುಗಿದಿದೆ: ಗುಜರಾತ್ ನಲ್ಲಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ

03:19 PM Sep 13, 2022 | Team Udayavani |

ಅಹಮ್ಮದಾಬಾದ್: ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪಿಸಿದ್ದಕ್ಕೆ ತಿರುಗೇಟು ನೀಡಿರುವ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಕಥೆ ಮುಗಿದು ಹೋಗಿದೆ ಎಂದು ತಿಳಿಸಿದ್ದಾರೆ.

Advertisement

ಇದನ್ನೂ ಓದಿ:ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್!: ಕಾಂಗ್ರೆಸ್ ಟೀಕೆ

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಗುಜರಾತ್ ನಲ್ಲಿ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಪಂಜಾಬ್ ನಲ್ಲಿರುವ ಆಮ್ ಆದ್ಮಿ ಸರ್ಕಾರ ಗುಜರಾತ್ ನಲ್ಲಿ ಚುನಾವಣಾ ಪ್ರಚಾರದ ಜಾಹೀರಾತಿಗಾಗಿ ಕೋಟ್ಯಂತರ ರೂಪಾಯಿ ವ್ಯಯಿಸುತ್ತಿದೆ. ಇದರಿಂದ ರಾಜ್ಯ ದಿವಾಳಿಯಾಗಿ, ನೌಕರರಿಗೆ ಸಂಬಳ ಕೊಡಲು ಹಣವಿಲ್ಲದಂತಾಗಲಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಯಾರು ಈ ಪ್ರಶ್ನೆ ಕೇಳಿದ್ದು ಎಂದು ಕೇಜ್ರಿವಾಲ್ ಪತ್ರಕರ್ತರನ್ನು ಪ್ರಶ್ನಿಸಿದಾಗ, ಇದು ಕಾಂಗ್ರೆಸ್ ಮುಖಂಡರ ಆರೋಪ ಎಂದಿದ್ದರು. ಆಗ ಕೇಜ್ರಿವಾಲ್, ಕಾಂಗ್ರೆಸ್ ಅವನತಿಯಾಗಿದೆ. ಕಾಂಗ್ರೆಸ್ ಪ್ರಶ್ನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ. ಜನರು ಕೂಡಾ ಈ ಬಗ್ಗೆ ಸ್ಪಷ್ಟತೆ ಹೊಂದಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

Advertisement

ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್ ಗಿಂತ ಬಿಜೆಪಿ ಪ್ರಮುಖ ಎದುರಾಳಿಯಾಗಿದೆ. ಜನರು ಕಾಂಗ್ರೆಸ್ ಗೆ ಮತ ಹಾಕಿ ತಮ್ಮ ಮತ ಹಾಳು ಮಾಡಬೇಡಿ. ಆ ಪಕ್ಷ ಎಲ್ಲಿಯೂ ಇಲ್ಲ. ಗುಜರಾತ್ ನಲ್ಲಿ ಬಿಜೆಪಿ ಆಡಳಿತ ನಡೆಸುವುದು ಜನರಿಗೆ ಬೇಕಾಗಿಲ್ಲ. ರಾಜ್ಯದಲ್ಲಿ ಮತದಾರರಿಗೆ ಆಮ್ ಆದ್ಮಿ ಪಕ್ಷ ಬಿಟ್ಟರೆ ಬೇರೆ ಆಯ್ಕೆ ಇಲ್ಲ ಎಂದು ಕೇಜ್ರಿವಾಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next