Advertisement

ಕಾಂಗ್ರೆಸ್‌ ಮುಕ್ತ ಭಾರತ ಖಚಿತ: ಡಾ.ಶರ್ಮಾ ವಿಶ್ವಾಸ

06:30 AM Mar 18, 2018 | Team Udayavani |

ಹುಬ್ಬಳ್ಳಿ: ದೇಶದ ಶೇ.76 ಭೂ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರದಲ್ಲಿದ್ದು, ಕೆಲವೇ ದಿನಗಳಲ್ಲಿ ಕಾಂಗ್ರೆಸ್‌ ಮುಕ್ತ ಭಾರತವಾಗುವುದರಲ್ಲಿ ಸಂದೇಹವಿಲ್ಲ ಎಂದು ಕೇಂದ್ರದ ಸಂಸ್ಕೃತಿ, ಪರಿಸರ ಹಾಗೂ ಅರಣ್ಯ ಖಾತೆ ರಾಜ್ಯ ಸಚಿವ ಡಾ. ಮಹೇಶ ಶರ್ಮಾ ಹೇಳಿದರು. 

Advertisement

ಇಲ್ಲಿನ ದೇಶಪಾಂಡೆ ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಹು.ಧಾ.ಕೇಂದ್ರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ ಮುಕ್ತ ಭಾರತದ ಘೋಷಣೆ ಮಾಡಿದ್ದಾರೆ. ದೇಶದ 29 ರಾಜ್ಯಗಳಲ್ಲಿ 21ರಲ್ಲಿ ಎನ್‌ಡಿಎ ಅಧಿಕಾರದಲ್ಲಿದೆ. 3 ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next