Advertisement

ಕಾಂಗ್ರೆಸ್‌ ಮುಕ್ತ ಭಾರತ ಕನಸಿನ ಮಾತು

12:28 PM Feb 19, 2018 | Team Udayavani |

ಮಹದೇವಪುರ: ದೇಶದಲ್ಲಿ ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಮಾಡುವುದು ಕನಸಿನ ಮಾತು ಎಂದು ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು.

Advertisement

ಕಾಡುಗುಡಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಮಾತನಾಡಿ, ಸಂಪೂರ್ಣ ಬಿಜೆಪಿ ತೆಕ್ಕೆಯಲ್ಲಿದ್ದ ಗುಜರಾತ್‌ನಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜನ ಕಾಂಗ್ರೆಸ್‌ನತ್ತ ಒಲು ತೋರಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅಧಿಕ ತೆರಿಗೆಯಿಂದಾಗಿ ದೇಶದ ಜನ ಬದಲಾವಣೆ ಬಯಸಿದ್ದಾರೆ.

ಇನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಬಿಜೆಪಿಯ ಹಂಬಲ ಕೇವಲ ಕನಸಾಗೇ ಉಳಿಯಲಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ನಾರಾಯಣ ಸ್ವಾಮಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌, ಪಾಲಿಕೆ ಸದಸ್ಯರಾದ ಉದಯ್‌ಕುಮಾರ್‌, ಎ.ಸಿ.ಹರಿಪ್ರಸಾದ್‌, ಎನ್‌.ರಮೇಶ್‌, ಜಿ.ಪಂ ಸದಸ್ಯ ಕೆ.ಕೆಂಪರಾಜ್‌, ವರ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಂ ರೆಡ್ಡಿ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next