Advertisement

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

05:27 PM Mar 27, 2024 | Team Udayavani |

ಬೆಳಗಾವಿ: ಕಾಂಗ್ರೆಸ್ ನವರಿಗೆ ಈಗಲೇ ಭಯ ಶುರುವಾಗಿದೆ. ಕೇಸರಿ ವಿರೋಧಿಸಿದವರು, ದೇವಸ್ಥಾನಕ್ಕೆ ಹೋಗಲ್ಲ ಎನ್ನುವರು, ಕುಂಕುಮ ಹಚ್ಚಲ್ಲ ಎನ್ನುವವರು, ಹಸು ತಿಂದರೆ ಎನೂ ತಪ್ಪು ಎಂದು ಕೇಳುವವರು, ಪಾಕಿಸ್ತಾನ್ ಜಿಂದಾಬಾದ್ ಎನ್ನುವವರ ವಿರುದ್ಧ ಕ್ರಮ ಕೈಗೊಳ್ಳದ ಪಾರ್ಟಿಯವರು ಈಗ ಕೇಸರಿ ಧ್ವಜ ಇಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ಹೇಳಿದರು.

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೇಸರಿ ಶಾಲು ಕೇಸರಿ ಧರಿಸಿ ಧ್ವಜ ಹಿಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಎಷ್ಟು ಭಯ ಬಿದ್ದಿದ್ದಾರೆಂದು ನೀವೇ ಯೋಚನೆ‌ ಮಾಡಿ. ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಇಬ್ಬರು ಇದಕ್ಕೆ ಉತ್ತರ ಕೊಡಬೇಕು ಎಂದರು.

ಬಿಜೆಪಿಯ ಬಿರುಗಾಳಿಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ. ಯಾವ ಪಕ್ಷಕ್ಕೆ ಅಭ್ಯರ್ಥಿಗಳು ಇಲ್ಲವೋ ಅವರು ಮಕ್ಕಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ರವಿಕುಮಾರ್ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next