Advertisement

ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ?

01:18 AM Jul 07, 2019 | Team Udayavani |

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಪಕ್ಷದ ನಿಷ್ಠಾವಂತರೂ ಆಗಿದ್ದ ರಾಮಲಿಂಗಾರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ಪುತ್ರಿ ಸೌಮ್ಯರೆಡ್ಡಿ ಅವರ ಕೈಲೂ ರಾಜೀನಾಮೆ ಕೊಡಿಸಿ ಪಕ್ಷ ಬಿಡುವ ತೀರ್ಮಾನ ಕೈಗೊಂಡಿದ್ದೇ ಆದರೆ ಕಾಂಗ್ರೆಸ್‌ಗೆ ನಗರದಲ್ಲಿ ಕಷ್ಟವಾಗಲಿದೆ.

Advertisement

ಜತೆಗೆ, ನಗರದ ಶಾಸಕರಾದ ಮುನಿರತ್ನ, ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ್‌ ಅವರು ರಾಮಲಿಂಗಾರೆಡ್ಡಿ ಅವರೊಂದಿಗೆ ರಾಜೀನಾಮೆ ನೀಡಿರುವುದರಿಂದ ಐದೂ ಜನರ ರಾಜೀನಾಮೆ ಅಂಗೀಕಾರವಾದರೆ ಮುಂದಿನ ಸೆಪ್ಟೆಂಬರ್‌ನಲ್ಲಿ ನಡೆಯುವ ಬಿಬಿಎಂಪಿ ಮೇಯರ್‌ -ಉಪ ಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ಹಿಡಿಯಲು ಸಾಧ್ಯವಾಗದು.

ಅಷ್ಟೇ ಅಲ್ಲದೆ ಐವರೂ ಶಾಸಕರು ಕಾಂಗ್ರೆಸ್‌ನಿಂದ ದೂರವಾದರೆ ಅವರವರ ಕ್ಷೇತ್ರಗಳಲ್ಲಿರುವ ಪಾಲಿಕೆ ಸದಸ್ಯರು ಅವರನ್ನು ಹಿಂಬಾಲಿಸಿದರೆ ನಗರದಲ್ಲಿ ಪಕ್ಷದ ಅಸ್ತಿತ್ವಕ್ಕೂ ಧಕ್ಕೆಯಾಗಲಿದೆ. ಇದು ಮುಂದಿನ ವರ್ಷ ನಡೆಯಲಿರುವ ಬಿಬಿಎಂಪಿ ಚುನಾವಣೆ ಮೇಲೂ ಪರಿಣಾಮ ಬೀರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next