Advertisement

ಕಾಂಗ್ರೆಸ್ ‘ಭಯೋತ್ಪಾದನೆಯ ತಾಯಿ’ |ರಾಮನನ್ನು ನಿಂದಿಸಿದ್ದಕ್ಕೆ ಫಲ ಅನುಭವಿಸಲೇಬೇಕು : ಯೋಗಿ

11:05 AM Sep 13, 2021 | Team Udayavani |

ಉತ್ತರ ಪ್ರದೇಶ : ವಿಧಾನ ಸಭಾ ಚುನಾವಣೆಗೆ ಇನ್ನೇನು ಕೆಲವು ತಿಂಗಳುಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

Advertisement

ಸಂತ ಕಬೀರ್ ನಗರದಲ್ಲಿ 126 ಕೋಟಿ ವೆಚ್ಚದಲ್ಲಿ ನಿರ್ಮಾಣದ ಯೋಜನೆಯ ಅಡಿಯಲ್ಲಿ ಜಿಲ್ಲಾ ಕಾರಾಗೃಹದ ಶಿಲಾನ್ಯಾಸ ಕಾರ್ಯಕ್ರಮವನ್ನು ಸಭೆಯನ್ನು ಉದ್ದೆಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ನನ್ನು ಭಯೋತ್ಪಾದನೆಯ ತಾಯಿ ಎಂದು ಕರೆದಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪ್ರಿಯಾಂಕಾ ಗಾಂಧಿ ನಾಯಕತ್ವ

ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಭಯೋತ್ಪಾದನೆಯ ವಿಷ ಬೀಜ ಬಿತ್ತಿದ ಪಕ್ಷ ಎಂದು ಕಿಡಿ ಕಾರಿದ್ದಲ್ಲದೇ, 2022 ರ ಚುನಾವಣೆಯ ನಂತರ ಕಾಂಗ್ರೆಸ್ ನಿರ್ನಾಮವಾಗಿ ಹೋಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಗೆಲ್ಲುವುದು ಕೂಡ ಅನುಮಾನ ಎಂದಿದ್ದಾರೆ.

ಇನ್ನು, ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷದ ವಿರುದ್ಧವೂ ಕೂಡ ಗುಡುಗಿದ ಅವರು, ಅಧಿಕಾರದಲ್ಲಿದ್ದಾಗ ರಾಜ್ಯದ ಜನರ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಜನರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಕೂಡ ಮಾಡಿಲ್ಲ ಎಂದು ಅವರು ಹರಿಹಾಯ್ದಿದ್ದಾರೆ.

Advertisement

ಭಗವಾನ್ ರಾಮನ ಭಕ್ತರ ಮೇಲೆ ಗುಂಡು ಹಾರಿಸಿದವರು ಮತ್ತು ತಾಲಿಬಾನಿಗಳನ್ನು ತಮ್ಮ ಜಾತೀಯತೆ ಮತ್ತು ರಾಜವಂಶದ ಮನಸ್ಥಿತಿಯಿಂದ ಬೆಂಬಲಿಸುವವರನ್ನು ರಾಜ್ಯದ ಜನರು ಎಂದಿಗೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ.

ಯುಪಿಗೆ ಏನು ಕೊರತೆ ಇತ್ತು?ನಿರುದ್ಯೋಗ, ಮಾಫಿಯಾ ಆಡಳಿತ ಮತ್ತು ಭ್ರಷ್ಟಾಚಾರವನ್ನು ಹೊರತುಪಡಿಸಿ ಕಾಂಗ್ರೆಸ್, ಎಸ್‌ಪಿ ಮತ್ತು ಬಿಎಸ್‌ಪಿ ಏನು ನೀಡಿದೆ? ಎಂದು ಅವರು ಪ್ರಶ್ನಿಸಿದ್ದಲ್ಲದೇ, ಭಗವಾನ್ ರಾಮನನ್ನು ನಿಂದಿಸಿದ್ದು, ರಾಮ ಭಕ್ತರ ಮೇಲೆ ಗುಂಡು ಹಾರಿಸಿದ ಫಲವನ್ನು ಕಾಂಗ್ರೆಸ್ ಅನುಭವಿಸಲಿದೆ ಎಂದಿದ್ದಾರೆ.

ಇದನ್ನೂ ಓದಿ : ಈ ವ್ಯಕ್ತಿ ಪ್ರತಿದಿನ 6 ಕೆಜಿ ಚಿನ್ನ ಧರಿಸ್ತಾನೆ : 3 ಕೆಜಿ ಚಿನ್ನದ ಶರ್ಟ್ ಖರೀದಿಸಿದ್ದಾನೆ

Advertisement

Udayavani is now on Telegram. Click here to join our channel and stay updated with the latest news.

Next