Advertisement

ಫೆ.3ರ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್‌ ಸಿದ್ಧತೆ

08:39 PM Jan 30, 2023 | Team Udayavani |

ಬೆಂಗಳೂರು: ಜಂಟಿ ಬಸ್‌ ಯಾತ್ರೆ ನಂತರ ಪ್ರತ್ಯೇಕ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್‌ನಲ್ಲಿ ಸಿದ್ಧತೆ ನಡೆದಿದ್ದು, ಫೆ.3 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೋಲಾರದ ಕೂಡುಮಲೆಯಿಂದ ಯಾತ್ರೆ ಆರಂಭಿಸಲಿದ್ದಾರೆ.

Advertisement

ಸೋಮವಾರ ಡಿ.ಕೆ.ಶಿವಕುಮಾರ್‌ ಯಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ಎಂ.ಆರ್‌.ಸೀತಾರಾಂ, ಯಾತ್ರೆ ಸಾಗಲಿರುವ ಮಾರ್ಗ ಹಾಗೂ ಸಭೆಗಳ ಬಗ್ಗೆ ಸ್ಥಳೀಯ ಮುಖಂಡರ ಜತೆ ಸಮಾಲೋಚನೆ ನಡೆಸಿದರು.

ಕೋಲಾರ ಜಿಲ್ಲಾ ಕಾಂಗ್ರೆಸ್‌ ಸಮಿತಿ ಉಸ್ತುವಾರಿ ಉಪಾಧ್ಯಕ್ಷರೂ ಆಗಿರುವ ಸೀತಾರಾಂ, ಕಾರ್ಯಕ್ರಮದ ರೂಪರೇಷೆ, ಜಿಲ್ಲೆಯಲ್ಲಿ ಸಾಗಲಿರುವ ಯಾತ್ರೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಕುರಿತು ಮುಖಂಡರ ಸಲಹೆ-ಸೂಚನೆ ಪಡೆದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೊತ್ತೂರು ಮಂಜು ಸ್ಥಳೀಯ ಮುಖಂಡರು ಹಾಜರಿದ್ದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಫೆ.3 ರಂದು ಬಸವಕಲ್ಯಾಣದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ. 12 ರವರೆಗೆ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಡಿ.ಕೆ.ಶಿವಕುಮಾರ್‌ ದಕ್ಷಿಣ ಕರ್ನಾಟಕದ ಜಿಲ್ಲೆಗಳ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆ.

ತಂಡ
*ಡಿ.ಕೆ.ಶಿವಕುಮಾರ್‌ ನೇತೃತ್ವದ ತಂಡದಲ್ಲಿ ಬಿ.ಕೆ. ಹರಿಪ್ರಸಾದ್‌, ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ, ವೀರಪ್ಪಮೊಯ್ಲಿ, ರಮೇಶ್‌ಕುಮಾರ್‌ ಸೇರಿ 54 ನಾಯಕರು.

Advertisement

*ಸಿದ್ದರಾಮಯ್ಯ ನೇತೃತ್ವದ ತಂಡದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌, ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌, ಮಾಜಿ ಸಚಿವರಾದ ಜಮೀರ್‌ ಅಹಮದ್‌, ಎಚ್‌.ಸಿ.ಮಹದೇವಪ್ಪ, ಸೇರಿ 35 ನಾಯಕರು.

Advertisement

Udayavani is now on Telegram. Click here to join our channel and stay updated with the latest news.

Next