Advertisement

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

11:22 PM Apr 19, 2024 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಭೇಟಿಯ ಕೇವಲ ಒಂದು ದಿನದ ಹಿಂದೆ ಕಾಂಗ್ರೆಸ್‌ ನೀಡಿದ ಚೊಂಬಿನ ಜಾಹೀರಾತು ರಾಜ್ಯಾದ್ಯಂತ ಸದ್ದು ಮಾಡಿದ್ದು, ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಅದೇ ಚೊಂಬಿನ ಮೂಲಕ ಪ್ರಧಾನಿಯನ್ನು ಸ್ವಾಗತಿಸಲು ಕಾಂಗ್ರೆಸ್‌ ಸಜ್ಜಾಗಿದೆ.

Advertisement

ಎಲ್ಲ ಪತ್ರಿಕೆಗಳಲ್ಲೂ “ರಾಜ್ಯಕ್ಕೆ ಮೋದಿ ನೇತೃತ್ವದ ಸರಕಾರದ ಕೊಡುಗೆ ಚೊಂಬು’ ಎಂದು ಕಾಂಗ್ರೆಸ್‌ ಜಾಹೀರಾತು ನೀಡಿದೆ. ಅದನ್ನು ನಾಯಕರು, ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲೂ ಗರಿಷ್ಠ ಮಟ್ಟದಲ್ಲಿ ಹಂಚಿಕೊಂಡಿದ್ದಾರೆ. ಇದರ ಜತೆಗೆ ಚುನಾವಣ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಮೋದಿಗೆ ಶನಿವಾರ ಚೊಂಬು ಪ್ರದರ್ಶಿಸಲು ನಿರ್ಧರಿಸಿದೆ.

ಚುನಾವಣ ಪ್ರಚಾರಕ್ಕಾಗಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಅಲ್ಲಿಂದ ನಗರದ ಅರಮನೆ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ “ಕರ್ನಾಟಕಕ್ಕೆ ಮೋದಿ ಸರಕಾರದ ಕೊಡುಗೆ ಚೊಂಬು’ ಎಂಬ ಸಂದೇಶವನ್ನು ವಿನೂತನ ಪ್ರತಿಭಟನೆಯೊಂದಿಗೆ ತಲುಪಿಸಲು ಕಾಂಗ್ರೆಸ್‌ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next