Advertisement

ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ವಿಧೇಯಕ ಮಂಡನೆ ಹಿನ್ನೆಲೆ: ಶಾಸಕರಿಗೆ ಕಾಂಗ್ರೆಸ್ ವಿಪ್

01:51 PM Sep 26, 2020 | keerthan |

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿಂದು ಭೂ ಸುಧಾರಣಾ ತಿದ್ದುಪಡಿ ಮಸೂದೆ ಮತ್ತು ಎಪಿಎಂಸಿ ವಿಧೇಯಕ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

Advertisement

ವಿಧಾನಸಭೆ ಮತ್ತು ಪರಿಷತ್ ಅಧಿವೇಶನಕ್ಕೆ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಾಗಲು ಕಾಂಗ್ರೆಸ್ ಸೂಚಿಸಿದೆ. ವಿಧಾನಸಭೆ, ಪರಿಷತ್ ಕಾಂಗ್ರೆಸ್ ಶಾಸಕರಿಗೆ ಪ್ರತಿಪಕ್ಷದ ಮುಖ್ಯ ಸಚೇತಕರು ವಿಪ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ:ತಂಗಿಯ ಒಂದು ಪ್ರಶ್ನೆಯಿಂದ ಕೃಷಿ ಮಹತ್ವ ಅರಿತು ಮನೆಯಂಗಳದಲ್ಲೇ ಭತ್ತ ಬೆಳೆದ ಅವಳಿ ಸಹೋದರರು

ಅದಲ್ಲದೆ ಕಾಂಗ್ರೆಸ್ ಪಕ್ಷವು ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ಕುರಿತು ಇಂದು ಚರ್ಚೆಯಾಗುವ ಸಾಧ್ಯತೆಯಿದೆ. ಇಂದು ಅಧಿವೇಶನದ ಕಡೆಯ ದಿನವಾಗಿದ್ದು, ಬಹಳಷ್ಟು ಬೆಳವಣಿಗೆಗಳು ನಡೆಯುವ ಸಾಧ್ಯತೆಯಿದೆ. ಈ ಮಧ್ಯೆ ಬಿಜೆಪಿ ಕೂಡಾ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next