Advertisement

ಸಿಎಂ ಪುತ್ರನ ಎದುರೇ ಕೈ -ಜೆಡಿಎಸ್‌ ಕಾರ್ಯಕರ್ತರ ಹೊಡೆದಾಟ 

02:47 PM Feb 18, 2018 | |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರ ಎದುರು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದ ಗೆಜ್ಜಗಳ್ಳಿ ಎಂಬಲ್ಲಿ ನಡೆದಿದೆ. 

Advertisement

15 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿ ಉದ್ಘಾಟನೆಗೆ ತೆರಳಿದ್ದ ಯತೀಂದ್ರ ಅವರಿಗೆ ಜೆಡಿಎಸ್‌ ಕಾರ್ಯಕರ್ತರು ಘೇರಾವ್‌ ಹಾಕಿ ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಮಧ್ಯಪ್ರವೇಶಿಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. 

ಜೆಡಿಎಸ್‌ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇದ್ದ ಕಾರಣಕ್ಕೆ  ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ. 

ಹಲವು ಜೆಡಿಎಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಇದರ ವಿರುದ್ಧವೂ ಆಕ್ರೋಶ ಭುಗಿಲೆದ್ದಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next