Advertisement

ಕೈ, ದಳದಿಂದ ಯಾರಾದರೂ ಪ್ರಧಾನಿ ಆಗಲಿ

11:39 AM Jul 10, 2018 | |

ಬಾಗಲಕೋಟೆ: ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರ್ಕಾರ ರಚಿಸಿದ್ದು, ಲೋಕಸಭೆ ಚುನಾವಣೆಯನ್ನೂ ಜತೆಯಾಗಿಯೇ ಎದುರಿಸುತ್ತೇವೆ. ಕಾಂಗ್ರೆಸ್‌-ಜೆಡಿಎಸ್‌ನಿಂದ ಯಾರಾದರೂ ಪ್ರಧಾನಿ ಆಗಲಿ. ಆದರೆ, ಮುಂದಿನ ಪ್ರಧಾನಿ ಬಿಜೆಪಿಯೇತರ ಪಕ್ಷದ ನಾಯಕರಾಗಿರುತ್ತಾರೆ ಎಂದು ರಾಜ್ಯಸಭೆ ಸದಸ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್‌ ಹೇಳಿದರು.

Advertisement

ರಾಷ್ಟ್ರೀಯ ಭಾವೈಕ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷ ಆಯ್ಕೆ ಬಗ್ಗೆ ರಾಹುಲ್‌ ಗಾಂಧಿ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಪಕ್ಷದ ಪ್ರಮುಖ ಕಾರ್ಯಕರ್ತರಿಗೆ ನಿಗಮ- ಮಂಡಳಿಗೆ ನೇಮಕ ಮಾಡಲಾಗುವುದು ಎಂದರು.

ಅಕ್ಟೋಬರ್‌ನಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆಂಬ ಶ್ರೀ ರಂಭಾಪುರಿ ಜಗದ್ಗುರುಗಳ ಹೇಳಿಕೆಗೆ ನಾನು ಉತ್ತರ ಕೊಡಲ್ಲ. ರಾಜಕಾರಣಿಗಳು ಹೀಗೆ ಹೇಳಿದ್ದರೆ ಉತ್ತರಿಸುತ್ತಿದ್ದೆ. ಸ್ವಾಮೀಜಿಗಳು ಅವರ ಅನಿಸಿಕೆ ಹೇಳಿದ್ದಾರೆ. ಅವರು ಮಾತನಾಡುವ ವೇಳೆ ನಾವು ಮಾತನಾಡುವುದು ತಪ್ಪು ಎಂದರು.

ಚರ್ಚೆ-ಗೊಂದಲ ಸಾಮಾನ್ಯ: ಸಭಾಪತಿ ಆಯ್ಕೆ ಕುರಿತ ಗೊಂದಲ ಇದೆ. ಸಮ್ಮಿಶ್ರ ಸರ್ಕಾರ ಅಂದ ಮೇಲೆ ಇದು ಸಾಮಾನ್ಯ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next