Advertisement

ಕಾಂಗ್ರೆಸ್‌-ಜೆಡಿಎಸ್‌ ಕುದುರೆ ವ್ಯಾಪಾರ ಯತ್ನ: ಬೊಮ್ಮಾಯಿ

11:41 PM Jul 09, 2019 | Lakshmi GovindaRaj |

ಬೆಂಗಳೂರು: “ರಾಜೀನಾಮೆ ನೀಡಿದ ಶಾಸಕರಿಗೆ ಸಚಿವ ಸ್ಥಾನದ ಆಫ‌ರ್‌ ನೀಡುವ ಮೂಲಕ ಕಾಂಗ್ರೆಸ್‌, ಜೆಡಿಎಸ್‌ ಕುದುರೆ ವ್ಯಾಪಾರಕ್ಕೆ ಪ್ರಯತ್ನ ನಡೆಯುತ್ತಿವೆ’ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಆರೋಪಿಸಿದರು.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌, ಜೆಡಿಎಸ್‌ನ ಕೆಲ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಸಂಖ್ಯಾಬಲ ಕಳೆದುಕೊಂಡಿದೆ. ಜತೆಗೆ ನೈತಿಕತೆಯನ್ನೂ ಕಳೆದುಕೊಂಡಿದೆ. ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ರಾಜೀನಾಮೆ ನೀಡಿದವರೆಲ್ಲಾ ಅನುಭವಿ ಶಾಸಕರು. ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಶಾಸಕರಿಗೆ ಸಚಿವ ಸ್ಥಾನದ ಆಫ‌ರ್‌ ನೀಡುವ ಮೂಲಕ ಕುದುರೆ ವ್ಯಾಪಾರ ಪ್ರಯತ್ನ ನಡೆಸುತ್ತಿವೆ. ಜತೆಗೆ ರಾಜೀನಾಮೆ ನೀಡಿರುವ ಶಾಸಕರಿಗೆ ಪಕ್ಷಾಂತರ ನಿಷೇಧ ಕಾಯ್ದೆ ಹೆಸರಿನಲ್ಲಿ ಬೆದರಿಕೆ ಒಡ್ಡಲಾಗುತ್ತಿದೆ. ಸದನದ ಹೊರಗಿನ ಚಟುವಟಿಕೆಗೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗದು.

ತಮಿಳುನಾಡಿನ ಪ್ರಕರಣಕ್ಕೂ ರಾಜ್ಯದ ಪ್ರಕರಣಕ್ಕೂ ವ್ಯತ್ಯಾಸವಿದೆ. ಸ್ವಯಂಪ್ರೇರಿತ ರಾಜೀನಾಮೆಗೆ ಪಕ್ಷಾಂತರ ಕಾಯ್ದೆ ಅನ್ವಯವಾಗದು ಎಂದು ಹೇಳಿದರು. ಶಾಸಕರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್‌ ವಿಪ್‌ ನೀಡಿದೆ. ಶಾಸಕರ ಸಂವಿಧಾನ ಬದ್ಧವಾದ ಕಾರ್ಯಕ್ಕೆ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಅಡ್ಡಿಪಡಿಸುತ್ತಿವೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next