Advertisement

ಹಳೆ ಪಿಂಚಣಿ ಪದ್ಧತಿಗೆ ಆಗ್ರಹ;  ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ

12:46 AM Dec 21, 2022 | Team Udayavani |

ಬೆಳಗಾವಿ: ನೂತನ ಪಿಂಚಣಿ ಯೋಜನೆ ರದ್ದತಿಗಾಗಿ ನಡೆಯುತ್ತಿರುವ ಹೋರಾಟ ವಿಧಾನಸಭೆಯಲ್ಲಿ  ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ವಾತಾವರಣವನ್ನು ಕಾವೇರಿಸಿತು. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಚರ್ಚೆಗೆ ಅವಕಾಶ ಕಲ್ಪಿಸಬೇಕು ಹಾಗೂ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟು ಹಿಡಿದರು.

Advertisement

ಸಾವಿರಾರು ಮಂದಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಆಡಳಿತ ವ್ಯವಸ್ಥೆಯೂ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಯವರು ಧರಣಿ ನಿರತರ ಜತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಇದೊಂದು ಗಂಭೀರ ವಿಷಯ. ಸರಕಾರವು ಸರಕಾರಿ ನೌಕರರ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ಅನ್ಯಾಯವಾಗಲು ಅವಕಾಶ ಕಲ್ಪಿಸಿಲ್ಲ. ತುಟ್ಟಿಭತ್ತೆ ಸೇರಿದಂತೆ ಹಲವು ಸೌಲಭ್ಯ ತತ್‌ಕ್ಷಣವೇ ನೀಡಿದೆ. ಏಳನೇ ವೇತನ ಆಯೋಗ ಶಿಫಾರಸು  ಕುರಿತೂ ಸಮಿತಿ ಸಹ ರಚಿಸಿದೆ ಎಂದು ಹೇಳಿದರು.

ಪಿಂಚಣಿ ವ್ಯವಸ್ಥೆಯ ಸಾಧಕ-ಬಾಧಕ ಚರ್ಚೆಯಾಗ ಬೇಕಿದೆ. ರಾಜ್ಯದ ಬೊಕ್ಕಸದ ಮೇಲೆ ಆಗುವ ಪರಿಣಾಮಗಳ ಬಗ್ಗೆ  ಸಮಾಲೋಚಿಸಿ ನಿರ್ಣಯ ಕೈಗೊಳ್ಳಬೇಕಿದೆ. ಹೀಗಾಗಿ ಪ್ರತ್ಯೇಕ ಕಾಲಾವಕಾಶ ಕೊಟ್ಟು ಚರ್ಚೆಗೆ ಸಮಯ ನಿಗದಿ ಮಾಡಿ’ ಎಂದರು. ಇದಕ್ಕೆ ಒಪ್ಪಿದ ಸೀ³ಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಚರ್ಚೆಗೆ ಅವಕಾಶ ಕೊಡುವುದಾಗಿ ತಿಳಿಸಿದರು.

ಶೂನ್ಯವೇಳೆಯಲ್ಲಿ  ಪ್ರಸ್ತಾವ
ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ಲಿಂಗೇಶ್‌ ವಿಷಯ ಪ್ರಸ್ತಾವಿಸಿ 2006ರ ಅನಂತರ ಜಾರಿಗೆ ಬಂದಿರುವ ನೂತನ ಪಿಂಚಣಿ ವ್ಯವಸ್ಥೆಯಿಂದ 2.28 ಲಕ್ಷ ನೌಕರರು ಅತಂತ್ರ ಗೊಂಡಿದ್ದಾರೆ. ಅವರಿಂದ ಕಡಿತಗೊಳ್ಳುವ ಹಣ ಜೂಜಿಗೆ  ಬಳಸಲಾಗುತ್ತಿದೆ. ಮ್ಯೂಚುಯಲ್‌ ಫಂಡ್‌ನ‌ಲ್ಲಿ ಹೂಡಿಕೆ ಮಾಡಿರುವುದು ದುರಂತ. ತತ್‌ಕ್ಷಣ ರಾಜ್ಯ ಸರಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಮುಂದಾಗಿ ನೌಕರರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.

Advertisement

ಇದಕ್ಕೆ  ಜೆಡಿಎಸ್‌ನ ಸಾ.ರಾ.ಮಹೇಶ್‌, ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ, ಕಾಂಗ್ರೆಸ್‌ನ ಅಂಜಲಿ ಲಿಂಬಾಳ್ಕರ್‌ ಸೇರಿ ಹಲವು ಸದಸ್ಯರು ಧ್ವನಿಗೂಡಿಸಿದರು.

ಸರಕಾರದಿಂದ ಭರವಸೆ
ಹಳೇ ಪಿಂಚಣಿ ವ್ಯವಸ್ಥೆಯ ಮರುಜಾರಿಗೆ ವಿಧಾನ ಪರಿಷತ್‌ನಲ್ಲಿ ಆಗ್ರಹಿಸಲಾಯಿತು. ಪರಿಷತ್‌ ನಲ್ಲಿ  ಜೆಡಿಎಸ್‌ನ ಮರಿತಿಬ್ಬೇಗೌಡ, ಬಿಜೆಪಿಯ ಎಸ್‌.ವಿ. ಸಂಕನೂರು ಸೇರಿ ಇನ್ನಿತರರು ಪ್ರಸ್ತಾವಿಸಿದ ವಿಷಯಕ್ಕೆ ಉತ್ತರಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಸಿಎಂ ಬಸವ ರಾಜ ಬೊಮ್ಮಾಯಿ ಅವರು ಚರ್ಚಿಸುತ್ತಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದರು.

ಅದೇ ರೀತಿ ಅನುದಾನಿತ ಶಾಲೆಯ ಎಲ್ಲ ಬಗೆಯ ಸಿಬಂದಿಯನ್ನು ಪಿಂಚಣಿ ವ್ಯವಸ್ಥೆ ವ್ಯಾಪ್ತಿಗೆ ತರುವ ಕುರಿತು ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಅದಕ್ಕೂ ಮುನ್ನ ಮಾತನಾಡಿದ ಸದಸ್ಯರು, ಹೊಸ ಪಿಂಚಣಿ ವ್ಯವಸ್ಥೆಯಿಂದಾಗಿ ನಿವೃತ್ತಿ ಬಳಿಕ ನೌಕರರಿಗೆ ಕಡಿಮೆ ಮೊತ್ತದ ಪಿಂಚಣಿ ಬರುತ್ತಿದೆ. ಹಾಗಾಗಿ  ಜನಪ್ರತಿನಿಧಿಗಳ ಮಾದರಿಯಲ್ಲಿಯೇ, ಸರ ಕಾರಿ ನೌಕರರನ್ನೂ ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸಿ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಮಾಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next