ಧರ್ಮಸ್ಥಳ : ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
Advertisement
ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.
ಪಕ್ಷ ಸೇರ್ಪಡೆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, ಜಯಪ್ರಕಾಶ್, ಸ್ಥಳೀಯ ಗ್ರಾ.ಪಂ. ಮುಖಂಡರು ಉಪಸ್ಥಿತರಿದ್ದರು.