Advertisement

ಅಮೇಥಿಯಲ್ಲಿ ಜನ ಜಾಗರಣ ಅಭಿಯಾನ: ಪ್ರಧಾನಿ ವಿರುದ್ಧ ರಾಹುಲ್ ಆಕ್ರೋಶ

03:06 PM Dec 18, 2021 | Team Udayavani |

ಅಮೇಥಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಅಮೇಥಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Advertisement

ರಾಹುಲ್ ಗಾಂಧಿ ಅವರು ಸಹೋದರಿ ಪ್ರಿಯಾಂಕಗಾಂಧಿ ಅವರೊಂದಿಗೆ ಅಮೇಥಿಯಲ್ಲಿ ‘ಜನ್ ಜಾಗರಣ ಅಭಿಯಾನ’ ಪಾದಯಾತ್ರೆಗೆ ಚಾಲನೆ ನೀಡಿ ಬಿಜೆಪಿ ಸರಕಾರದ ವಿರುದ್ಧ ಕಿಡಿ ಕಾರಿದರು. ಸರಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ? ನೋಟು ಅಮಾನ್ಯೀಕರಣ, ಜಿಎಸ್ಟಿ, ಕೃಷಿ ಕಾನೂನುಗಳು ಸಾಮಾನ್ಯ ಜನರಿಗೆ ಪ್ರಯೋಜನವನ್ನು ನೀಡಿದೆಯೇ ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿಯವರು ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಮಧ್ಯಮ ವರ್ಗದ ಜನರು ಮತ್ತು ಬಡವರ ಮೇಲೆ ಕೆಟ್ಟದಾಗಿ ಪರಿಣಾಮ ಬೀರಿತು. ಇದು ದೊಡ್ಡ ಪ್ರಮಾಣದ ನಿರುದ್ಯೋಗಕ್ಕೂ ಕಾರಣವಾಯಿತು. ನೋಟು ಅಮಾನ್ಯೀಕರಣ, ತಪ್ಪಾಗಿ ಸೂಚಿಸಲಾದ ಜಿಎಸ್‌ಟಿ, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯ ಮಾಡದಿರುವುದು ಭಾರತದಲ್ಲಿ ನಿರುದ್ಯೋಗಕ್ಕೆ ಪ್ರಮುಖ ಕಾರಣ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದರು.

ಅಮೇಥಿಯ ಜನರ ಪ್ರೀತಿ, ಉತ್ಸಾಹ ಅಗಾಧವಾಗಿದ್ದು, ಜನರ ಹಿತ ಕಾಪಾಡಲು ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next