Advertisement

ಧಮ್ಕಿ ಕೇಸ್; “ಕೈ” ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣಾಗತಿ

10:24 AM Feb 23, 2018 | Sharanya Alva |

ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಶುಕ್ರವಾರ ರಾಮಮೂರ್ತಿ ನಗರ ಪೊಲೀಸರಿಗೆ ಶರಣಾಗಿದ್ದಾನೆ.

Advertisement

ಫೆ,21ರಂದು ನಾರಾಯಣಸ್ವಾಮಿ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿಹಚ್ಚುವುದಾಗಿ ಬೆದರಿಕೆ ಒಡ್ಡಿದ್ದ. ಬಳಿಕ ಈ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ಚರ್ಚೆಗೆ ಗ್ರಾಸವಾಗಿತ್ತು.

ಕೂಡಲೇ ನಾರಾಯಣಸ್ವಾಮಿಯನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯನವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ನಾರಾಯಣಸ್ವಾಮಿ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದರು. ಏತನ್ಮಧ್ಯೆ ನಾರಾಯಣಸ್ವಾಮಿ ಧಮ್ಕಿ ಪ್ರಕರಣ ವಿಧಾನಸಭೆಯ ಉಭಯ ಮಂಡಲಗಳಲ್ಲೂ ಪ್ರತಿಧ್ವನಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next