Advertisement

“ದಸರೆಗೆ ಕಾಂಗ್ರೆಸ್‌ ನಾಯಕರು ಬರ್ತಾರೆ’

06:40 AM Oct 12, 2018 | Team Udayavani |

ಮೈಸೂರು: ಚುನಾವಣೆ ಹಾಗೂ ಇನ್ನಿತರ ಕೆಲಸದ ಒತ್ತಡದಲ್ಲಿರುವ ಕಾಂಗ್ರೆಸ್‌ ನಾಯಕರು ಮುಂದಿನ ದಿನಗಳಲ್ಲಿ ದಸರಾ ಅಂಗವಾಗಿ ನಡೆಯುವ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್‌ ಹೇಳಿದರು.

Advertisement

ನಗರದ ಪುರಭನದಲ್ಲಿ ಗುರುವಾರ ನಡೆದ ಪಾರಂಪರಿಕ ನಡಿಗೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಕಾಂಗ್ರೆಸ್‌ ನಾಯಕರು ಚುನಾವಣೆ ಸಿದ್ಧತೆ ಹಾಗೂ ಮಂಡ್ಯ, ಚಾಮರಾಜನಗರ ದಸರಾದಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದಸರಾ ನಡೆಸುತ್ತಿದ್ದೇವೆ. ಸಚಿವ ಪುಟ್ಟರಂಗಶೆಟ್ಟಿ ಅವರ ಬೇಡಿಕೆಯನ್ನೂ ಈಡೇರಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next