Advertisement

ಕಾಂಗ್ರೆಸ್‌ ನಾಯಕರು ಮಾತ್ರ ಟಾರ್ಗೆಟ್‌

12:37 AM Oct 27, 2019 | Lakshmi GovindaRaju |

ಬೆಂಗಳೂರು: ಕೇಂದ್ರ ಬಿಜೆಪಿ ಕಾಂಗ್ರೆಸ್‌ ನಾಯಕರನ್ನು ಮಾತ್ರ ಟಾರ್ಗೆಟ್‌ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಆದಾಯ ತೆರಿಗೆ ಇಲಾಖೆ ದಾಳಿಗೊಳಗಾದ ಬಳಿಕ ಮಾಜಿ ಡಿಸಿಎಂ ಜಿ. ಪರಮೇಶ್ವರ ಅವರನ್ನು ಇದೇ ಮೊದಲ ಬಾರಿ ಶನಿವಾರ ಅವರ ನಿವಾಸದಲ್ಲಿ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

Advertisement

ಕೇಂದ್ರ ಬಿಜೆಪಿ ಕಾಂಗ್ರೆಸ್‌ ನಾಯಕರನ್ನು ಮಾತ್ರ ಟಾರ್ಗೆಟ್‌ ಮಾಡುತ್ತಿದೆ. ಬಿಜೆಪಿ ನಾಯಕರ ಮೇಲೆ ಏಕೆ ಟಾರ್ಗೆಟ್‌ ಮಾಡುತ್ತಿಲ್ಲ, ಅವರ ಮೇಲೆಕೆ ದಾಳಿಗಳು ಆಗುತ್ತಿಲ್ಲ. ಅವರೇನು ಪರಿಶುದ್ಧರೇ? ಇದೆಲ್ಲ ದ್ವೇಷ ರಾಜಕಾರಣ ಎಂದು ಕಿಡಿಕಾರಿದರು.

ನೆರೆಭಾಗದಲ್ಲಿ ಪಾದಯಾತ್ರೆ ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಹುಣಸೂರು ಕ್ಷೇತ್ರದ ಉಪಚುನಾವಣೆಯಲ್ಲಿ ಮಂಜುನಾಥ್‌ ಅವರು ಅಭ್ಯರ್ಥಿ ಎಂಬುದು ಫೈನಲ್‌ ಆಗಿದ್ದು, ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿ ಫೈನಲ್‌ ಆಗಬೇಕಿದೆ ಎಂದರು. ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಅವರನ್ನು ಪಕ್ಷದ ಕಾರ್ಯಕರ್ತರು ಸ್ವಾಗತ ಮಾಡಿಕೊಂಡಿದ್ದಾರೆ. ಡಿ.ಕೆ ಶಿವಕುಮಾರ್‌ ಅವರ ನಿವಾಸಕ್ಕೆ ಭಾನುವಾರ ತೆರಳಿ ಭೇಟಿ ಮಾಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next