Advertisement

ಪಕ್ಷದ ನಾಯಕರಿಂದಲೇ ಕಾಂಗ್ರೆಸ್‌ ಸರ್ವನಾಶ: ಸಚಿವ ಎಸ್‌. ಅಂಗಾರ

01:37 AM Jun 05, 2022 | Team Udayavani |

ಮಂಗಳೂರು: ಆರೆಸ್ಸೆಸ್‌ ಸಿದ್ಧಾಂತ ಹಾಗೂ ದೇಶಪ್ರೇಮದ ಬಗ್ಗೆ ಅರಿವಿಲ್ಲದ ಕಾಂಗ್ರೆಸ್‌ ನಾಯಕರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ.

Advertisement

ಅಧಿಕಾರದ ಆಸೆಯಿಂದ ಒಂದು ವರ್ಗದ ಜನರ ಓಲೈಕೆಗಾಗಿ ಅಸಭ್ಯ ಹೇಳಿಕೆ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆಯಂತಹ ನಾಯಕರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ವನಾಶವಾಗಲಿದೆ ಎಂದು ಸಚಿವ ಎಸ್‌. ಅಂಗಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚಡ್ಡಿ ಸುಡುವ ಬಗ್ಗೆ ಮಾತನಾಡುವ ಕಾಂಗ್ರೆಸ್‌ ನಾಯ ಕರ ಸಂಸ್ಕೃತಿ ಏನೆಂದು ರಾಜ್ಯದ ಜನತೆಗೆ ತಿಳಿದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷ ಕೂಡಾ ಜವಾಬ್ದಾರಿಯಿಂದ ವರ್ತಿಸಬೇಕು.

ಆದರೆ ರಾಜ್ಯದ ಕಾಂಗ್ರೆಸ್‌ ನಾಯಕರು ತಮ್ಮ ಜವಾಬ್ದಾರಿ ಮರೆತು ಕೀಳು ರಾಜಕೀಯ ನಡೆಸುತ್ತಿರುವುದು ಖಂಡನೀಯ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next