Advertisement

ಸಿದ್ದರಾಮಯ್ಯ ನಿವಾಸಕ್ಕೆ ಕಾಂಗ್ರೆಸ್‌ ನಾಯಕರ ದೌಡು

08:37 AM Jun 23, 2019 | Team Udayavani |

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಧ್ಯಂತರ ಚುನಾವಣೆ “ಬಾಂಬ್‌’ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಶನಿವಾರವೂ ಚಟುವಟಿಕೆಗಳು ಗರಿಗೆದರಿದ್ದವು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಸ್ತವ್ಯ ಇರುವ “ಕಾವೇರಿ’ ನಿವಾಸಕ್ಕೆ ಸಚಿವರು, ಶಾಸಕರು ಸೇರಿ ಕಾಂಗ್ರೆಸ್‌ ನಾಯಕರು ಭೇಟಿ ನೀಡಿ ಮಾತುಕತೆ ನಡೆಸಿದರು.

Advertisement

ಸಚಿವರಾದ ಕೆ.ಜೆ.ಜಾರ್ಜ್‌, ಪಿ.ಟಿ.ಪರಮೇಶ್ವರ್‌ ನಾಯ್ಕ, ಶಾಸಕರಾದ ಶರಣಬಸಪ್ಪ ದರ್ಶನಾಪುರ, ಸುಬ್ಟಾರೆಡ್ಡಿ ಸೇರಿ ಹಲವರು ಆಗಮಿಸಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next