Advertisement

Congress Leaders: ಕೇಂದ್ರ ಸಚಿವ ಸ್ಥಾನದಿಂದ ಎಚ್‌.ಡಿ.ಕುಮಾರಸ್ವಾಮಿ ಇಳಿಸಲಾಗಲ್ಲ: ನಿಖಿಲ್‌

12:35 AM Aug 26, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರನ್ನು ಯಾವ ರೀತಿ ಕಟ್ಟಿ ಹಾಕಬೇಕು ಎಂದು ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆ ನಡೆಸಿದ್ದಾರೆ. ಆದರೆ ಇವರ್ಯಾರೂ ಸಹ ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಈಗ ಯಾಕೆ ಇದನ್ನು ಪ್ರಶ್ನೆ ಮಾಡುತ್ತಿದ್ದಾರೆ? ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಸಹಿ ಹಾಕಿಲ್ಲ. ಸರಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಅಷ್ಟೇ. ಮುಡಾ ಹಗರಣ ಮುಚ್ಚಿಹಾಕುವ ಯೋಜನೆಯಷ್ಟೆ ಎಂದು ಆರೋಪಿಸಿದರು.

ಚನ್ನಪಟ್ಟಣ ಉಪ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಖಿಲ್‌, ಯಾವುದೇ ತೀರ್ಮಾನ, ಚರ್ಚೆ ಬೀದಿಯಲ್ಲಿ ಮಾಡೋದು ಸೂಕ್ತ ಅಲ್ಲ. ದಿಲ್ಲಿಯ ಬಿಜೆಪಿ ಹೈಕಮಾಂಡ್‌ ಮತ್ತು ನಮ್ಮ ನಾಯಕರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಕ್ಷೇತ್ರದ ವರದಿ ಸಹ ಹೈಕಮಾಂಡ್‌ ಕೈಸೇರಿದೆ. ಕೆಲವೇ ದಿನಗಳಲ್ಲಿ ಎನ್‌ಡಿಎ ಅಭ್ಯರ್ಥಿ ಘೋಷಣೆ ಆಗಲಿದೆ ಎಂದರು.

ಚನ್ನಪಟ್ಟಣದಲ್ಲಿ ಕಳೆದ 2 ಬಾರಿ ಜನ ಆಶೀರ್ವಾದ ಮಾಡಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ್ದಾರೆ. ಹಾಗಾಗಿ ಪಕ್ಷದ ಧ್ವನಿಯಾಗಿ ಪಕ್ಷ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಚನ್ನಪಟ್ಟಣ ತಾಲೂಕು ಜೆಡಿಎಸ್‌ ಪಕ್ಷದ ಭದ್ರಕೋಟೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next