Advertisement

ಕೋವಿಡ್‌ ಆಸ್ಪತ್ರೆಗೆ ಕೈ ನಾಯಕರು ಭೇಟಿ

08:37 AM Jul 26, 2020 | Suhan S |

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಕಿತರಿಗೆ ದೊರೆಯುತ್ತಿರುವ ಚಿಕಿತ್ಸೆ ಹಾಗೂ ಸೌಲಭ್ಯಗಳನ್ನು ಖುದ್ದು ತಿಳಿಯುವ ನಿಟ್ಟಿನಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಹಾಗೂ ಕುಣಿಗಲ್‌ ಶಾಸಕ ಡಾ. ರಂಗನಾಥ್‌ ಕೋವಿಡ್‌ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

Advertisement

ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ಟಿ.ಇ.ವೀರಭದ್ರಯ್ಯ ಅವರೊಂದಿಗೆ ಕೋವಿಡ್‌ ಆಸ್ಪತ್ರೆಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಮಾತನಾಡಿಸಿದ ಮುಖಂಡರು, ರೋಗಿಗಳು ಆತ್ಮ ಸ್ಥೆçರ್ಯ ಕಳೆದು ಕೊಳ್ಳದೆ ಧೈರ್ಯದಿಂದ ಇರುವಂತೆ ಸಲಹೆ ನೀಡಿದರು.

ಕೋವಿಡ್ ಮಹಾಮಾರಿಯಿಂದಾಗಿ ಇಡೀ ವಿಶ್ವವೇ ತಲ್ಲಣಿಸುತ್ತಿರುವ ಈ ಕಾಲದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿ.ಎಸ್‌.ಯಡಿಯೂರಪ್ಪ ನೇತ್ವತದ ಸರ್ಕಾರ ಪಿಪಿಇ ಕಿಟ್‌, ಸಾನಿಟೈಸರ್‌, ವೆಂಟಿಲೇಟರ್‌ ಖರೀದಿಯಲ್ಲಿ ಅವ್ಯವಹಾರ ನಡೆದಿರುವುದು ಖಂಡನೀಯ, ಕೂಡಲೇ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸುವಂತೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ರಾಮಕೃಷ್ಣ ಒತ್ತಾಯಿಸಿದರು.

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ನಂತರ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಚುರುಕಿನಿಂದ ಕೆಲಸ ಮಾಡುತ್ತಿದ್ದು, ಬಿಜೆಪಿಯ ಕೋವಿಡ್‌ ಹಗರಣವನ್ನು ಜನರಿಗೆ ತಲುಪಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next