Advertisement

ದೆಹಲಿಗೆ ಕಾಂಗ್ರೆಸ್‌ ನಾಯಕರು;ಗೊಂದಲಗಳ ಕುರಿತು ರಾಗಾ ಜೊತೆ ಚರ್ಚೆ

06:00 AM Sep 19, 2018 | Team Udayavani |

ಬೆಂಗಳೂರು: ಸರ್ಕಾರ ಹಾಗೂ ಪಕ್ಷದಲ್ಲಿನ ಗೊಂದಲಗಳ ಕುರಿತು ಹೈ ಕಮಾಂಡ್‌ ನಾಯಕರ ಜೊತೆ ಚರ್ಚಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ದೆಹಲಿಗೆ ತೆರಳಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಈಗಾಗಲೇ ದೆಹಲಿಗೆ ತೆರಳಿದ್ದು,ಬುಧವಾರ ರಾಹುಲ್‌ ಗಾಂಧಿ ಹಾಗೂ ಹೈ ಕಮಾಂಡ್‌ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ.

Advertisement

ಜಾರಕಿಹೊಳಿ ಸಹೋದರರಿಂದ ಪಕ್ಷ ಹಾಗೂ ಸರ್ಕಾರದಲ್ಲಿ ಉಂಟಾಗಿರುವ ಗೊಂದಲ, ಡಿ.ಕೆ. ಶಿವಕುಮಾರ್‌ ಬಗ್ಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ರಿಂದ ಉಂಟಾದ ಸಮಸ್ಯೆಯ ಬಗ್ಗೆ ರಾಜ್ಯ ನಾಯಕರು ಹೈ ಕಮಾಂಡ್‌ ಗಮನಕ್ಕೆ ತರುವ ಸಾಧ್ಯತೆ ಇದೆ. ಇದೇ ವೇಳೆ, ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ 6 ಸ್ಥಾನಗಳ ಪೈಕಿ ಕಾಂಗ್ರೆಸ್‌ಗೆ ದೊರೆಯುವ 4 ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತಂತೆಯೂ ಚರ್ಚೆ ನಡೆಸಿ ಅಂತಿಮಗೊಳಿಸುವ ಸಾಧ್ಯತೆ ಇದೆ. 

Advertisement

Udayavani is now on Telegram. Click here to join our channel and stay updated with the latest news.

Next