Advertisement

ನಾಳೆ ಸಂಜೆ ಕಾಂಗ್ರೆಸ್ ನಾಯಕರಿಂದ ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ

07:53 PM Feb 21, 2022 | Team Udayavani |

ಬೆಂಗಳೂರು : ಕೆಂಪು ಕೋಟೆಯಲ್ಲಿ ಭಗವಾಧ್ವಜ ಹಾರಿಸುವ ಕುರಿತು ಸಚಿವ ಈಶ್ವರಪ್ಪ ಅವರ ಹೇಳಿಕೆ ವಿರೋಧಿಸಿ ಹೋರಾಟಕ್ಕಿಳಿದಿರುವ ಕಾಂಗ್ರೆಸ್ ರಾಜ್ಯಪಾಲರ ಭೇಟಿಗೆ ಮುಂದಾಗಿದೆ.

Advertisement

ನಾಳೆ , ಮಂಗಳವಾರ ಸಂಜೆ ೪ ಗಂಟೆಗೆ ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ರಾಜಭವನಕ್ಕೆ ಕಾಂಗ್ರೆಸ್ ನಿಯೋಗ ತೆರಳಲಿದೆ. ಅಲ್ಲದೆ ಶಿವಮೊಗ್ಗ ಪ್ರಕರಣವನ್ನೂ ರಾಜಭವನದ ಅಂಗಳಕ್ಕೆ ಕೊಂಡೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವರ ಹೇಳಿಕೆ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಾಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಪಾಲರಿಗೆ ದೂರು ಕೊಡಲು ನಿರ್ಧಾರ ಮಾಡಿದ್ದು, ವಿಧಾನಸೌಧದಿಂದ ರಾಜಭವನದ ವರೆಗೆ ಕೈ ನಾಯಕರ ಪಾದಯಾತ್ರೆ ಮೂಲಕ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next