Advertisement

Todayಕಾಂಗ್ರೆಸ್‌ ಶಾಸಕಾಂಗ ಸಭೆ: ಅಭಿಯೋಜನೆ ತೀರ್ಮಾನಕ್ಕೆ ಖಂಡನೆ? ಸಿಎಂ ಪರ ನಿರ್ಣಯ ಸಾಧ್ಯತೆ

01:45 AM Aug 22, 2024 | Team Udayavani |

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವ ಬೆನ್ನಲ್ಲಿಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಮಹತ್ವದ ಸಭೆ ಗುರುವಾರ ಸಂಜೆ 4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ನಡೆಯಲಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

Advertisement

ಈಗಾಗಲೇ ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬೆಂಬಲ ವ್ಯಕ್ತಪಡಿಸಿದೆ. ಜತೆಗೆ ಅಭಿ ಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ಖಂಡನೆ ಯನ್ನೂ ವ್ಯಕ್ತಪಡಿಸಿದೆ. ಗುರುವಾರದ ಸಭೆಯಲ್ಲೂ ಸಿಎಂ ಪರ ಸರ್ವಾನುಮತದ ನಿರ್ಣಯ ಅಂಗೀಕರಿಸಿ ರಾಜ್ಯಪಾಲರ ನಡೆಯನ್ನು ಖಂಡಿಸುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ನಾಳೆ ಸಿಎಂ, ಡಿಸಿಎಂ ದಿಲ್ಲಿಗೆ: ವರಿಷ್ಠರಿಗೆ ಮುಡಾ ವಿವರಣೆ?
ಬೆಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಒಟ್ಟಿಗೆ ಶುಕ್ರವಾರ ದಿಲ್ಲಿಗೆ ಪ್ರಯಾಣಿಸ ಲಿದ್ದಾರೆ. ಮುಡಾ ಹಗರಣದ ಸಂಬಂಧ ನಡೆದಿರುವ ಬೆಳವಣಿಗೆಗಳನ್ನು ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡುವುದೇ ಪ್ರಮುಖ ಉದ್ದೇಶವೆನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next