Advertisement

2018ರ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳಿಪಟ: ಡಿವಿಎಸ್‌

03:45 AM Feb 06, 2017 | Team Udayavani |

ಮಾಗಡಿ:  ಮುಂದಿನ ಚುನಾವಣೆಯಲ್ಲಿ ಶೇ.100ಕ್ಕೆ ನೂರರಷ್ಟು ಕಾಂಗ್ರೆಸ್‌ ಪಕ್ಷ ಧೂಳಿಪಟವಾಗಲಿದೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಭವಿಷ್ಯ ನುಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂತರಿಕ ಮಾಹಿತಿ ಪ್ರಕಾರ ಉತ್ತರ ಪ್ರದೇಶ ಮತ್ತು ಇತರೆ ಎರಡು ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ವಿಶ್ವಾಸವಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸ ಮಾಡಿದ್ದು, ಇದರಿಂದ ಬಿಜೆಪಿ ಬಹುಮತಗಳಿಸಲಿದೆ. ಆಸ್ಸಾಂ, ಕೇರಳದಲ್ಲಿ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿದೆ ಎಂದರು.

ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಬಿಜೆಪಿಗೆ ಬರುವ ಮುನ್ಸೂಚನೆಯಾಗಲಿ, ಸಮಯ ನಿಗದಿಯಾಗಲಿ ತಮಗೆ ಗೊತ್ತಿಲ್ಲ. ಇದು ಪಕ್ಷದ ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರ. ಆದರೆ ಕರ್ನಾಟದಲ್ಲಿ ರಾಜಕೀಯ ಧೃವೀಕರಣ ಆಗುವುದಂತೂ ನಿಜ ಎಂದರು.

ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆಯಿದೆ. ಕಾರಣ ಕಾಂಗ್ರೆಸ್‌ನ ರಾಜ್ಯ, ಜಿಲ್ಲಾ ಮಟ್ಟದಲ್ಲಿನ ಹಿರಿಯ ನಾಯಕರೆಲ್ಲರೂ ಅತೃಪ್ತಗೊಂಡಿದ್ದಾರೆ. 30 ವರ್ಷಗಳ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಒಳ್ಳೆ ಕೆಲಸ ಮಾಡಿದೆ ಹೀಗಾಗಿ ಸಾಕಷ್ಟು ಜನ ಬಿಜೆಪಿಯತ್ತ ವಾಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next