Advertisement

ಕೈ ಪ್ರಣಾಳಿಕೆ: ದಲಿತರಿಗೆ ಆದ್ಯತೆ?

12:14 AM Apr 01, 2019 | Team Udayavani |

ನವದೆಹಲಿ: ದೇಶದ ಶೇ.20 ರಷ್ಟು ಬಡವರಿಗೆ ವಾರ್ಷಿಕ 72 ಸಾವಿರ ಕೋಟಿ ರೂ. ಕನಿಷ್ಠ ಆದಾಯ ಒದಗಿಸುವುದಾಗಿ ಘೋಷಿಸಿರುವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ, ನ್ಯಾಯಾಂಗದಲ್ಲೂ ದಲಿತರು ಹಾಗೂ ಹಿಂದುಳಿದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವ ಭರವಸೆ ನೀಡಬಹುದು ಎಂದು ಹೇಳಲಾಗಿದೆ. ಈ ಸಂಬಂಧ ಮಾರ್ಚ್‌ 26 ರಂದು ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Advertisement

ಅಷ್ಟೇ ಅಲ್ಲ, ನ್ಯಾಯಾಲಯದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗದವರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಚರ್ಚೆ ನಡೆಯಬೇಕು ಎಂಬ ಅಭಿಪ್ರಾಯವೂ ಕೇಳಿಬಂದಿದೆ. ಕೆಲವೇ ದಿನಗಳಲ್ಲಿ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಲಿದೆ. ನ್ಯಾಯಾಂಗ, ನ್ಯಾಯಾಂಗ ನೇಮಕಾತಿ ಸಮಿತಿ ಹಾಗೂ ಇತರ ವಿಧಾನಗಳ ಮೂಲಕ ಈ ಗುರಿಯನ್ನು ಸಾಧಿಸಲಾಗುತ್ತದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next