Advertisement

Congress; ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗುವುದು ಖಚಿತ: ಭವಿಷ್ಯ ನುಡಿದ ಡಾ.ಮಹದೇವಶ್ರೀ

06:12 PM Mar 09, 2024 | Team Udayavani |

ವಿಜಯಪುರ : ಬರುವ ದಿನಗಳಲ್ಲಿ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಆಲಗೂರು ವೀರಶೈವ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹದೇವ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

Advertisement

ಬಬಲೇಶ್ವರ ಪಟ್ಟಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಶ್ರೀಗಳು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಈಗ ಕೇವಲ ಮಂತ್ರಿಯಾಗಿದ್ದು, ಬರುವ ದಿನಗಳಲ್ಲಿ ಮುಖ್ಯಮಂತ್ರಿಯೇ ಆಗಲಿದ್ದಾರೆ.

ಎಂ.ಬಿ.ಪಾಟೀಲ ಅವರು ಮುಖ್ಯಮಂತ್ರಿಯಾಗಲು ನಮ್ಮ ಗುರು ಗುರುಪಾದೇಶ್ವರರು, ಸಿದ್ಧೇಶ್ವರ ಶ್ರೀಗಳು, ನಮ್ಮ ಹಾಗೂ ಕ್ಷೇತ್ರ ಜನರ ಆಶೀರ್ವಾದದಿಂದ ಇದು ಸಾಧ್ಯವಾಗಲಿದೆ ಎಂದು ಭವಿಷ್ಯ ನುಡಿದರು.

ವಿಜಯಪುರ ಬರನಾಡು ಎಂಬ ಅಪಕೀರ್ತಿ ಅಳಿಸುವಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೆ ತಂದರು. ಪರಿಣಾಮ ಬರದ ನಾಡಿನ ರೈತರ ಬದುಕು ಬಂಗಾರವಾಗಿದೆ. ಹೀಗಾಗಿ ಅಭಿವೃದ್ಧಿ ಪರ ಕಾಳಜಿಯ ಎಂ.ಬಿ.ಪಾಟೀಲ ರಾಜ್ಯದ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next