Advertisement

“ಕಾಂಗ್ರೆಸ್‌ನಿಂದ ಕೀಳುಮಟ್ಟದ ರಾಜಕೀಯ’

07:29 AM Feb 14, 2017 | |

ಬೆಂಗಳೂರು: ವರಿಷ್ಠರಿಗೆ ಮುಖ್ಯಮಂತ್ರಿಗಳು ಕಪ್ಪ ನೀಡಿರುವುದು ಹಾಗೂ ಉಕ್ಕಿನ ಮೇಲ್ಸೇತುವೆ ಕಾಮಗಾರಿಯಲ್ಲಿ ಸಿಎಂ ಮತ್ತು ಅವರ ಶಿಷ್ಯ ವರ್ಗಕ್ಕೆ ಕಮಿಷನ್‌ ಸಂದಾಯವಾಗಿರುವ ಬಗ್ಗೆ ಮಾಡಿರುವ ಆರೋಪ ಜೀರ್ಣಿಸಿಕೊಳ್ಳಲು ಸಾಧ್ಯವಾಗದೆ ಹತಾಶವಾಗಿರುವ ಕಾಂಗ್ರೆಸ್‌ ಸಚಿವರು, ತಾವಿಬ್ಬರು ಮಾತನಾಡಿರುವ ಸೀಡಿ ಬಿಡುಗಡೆ ಮಾಡುವ ಮೂಲಕ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್‌ ಆರೋಪಿಸಿದ್ದಾರೆ.

Advertisement

ಕಾಂಗ್ರೆಸ್‌ನ ಕೆಲವು ಸಚಿವರು ತಮ್ಮ ಮೇಲೆ ಮಾಡಿರುವ ಆರೋಪ ಮತ್ತು ಅದಕ್ಕೆ ಸಂಬಂಧಿಸಿದಂತೆ ಸೀಡಿ ಬಿಡುಗಡೆ ಮಾಡಿರುವ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಹೈಕಮಾಂಡ್‌ಗೆ 1 ಸಾವಿರ ಕೋಟಿ ರೂ. ಕಪ್ಪ ಸಲ್ಲಿಸಿರುವುದು ಮತ್ತು ಉಕ್ಕಿನ ಮೇಲ್ಸೇತುವೆ ಕಾಮಗಾರಿಯಲ್ಲಿ ಮುಖ್ಯಮಂತ್ರಿಗಳು ಮತ್ತು ಅವರ ಶಿಷ್ಯ ವರ್ಗಕ್ಕೆ ಕಮಿಷನ್‌ ಸಂದಾಯವಾಗಿರುವ ಬಗ್ಗೆ ವಿಧಾನ ಪರಿಷತ್‌ ಸದಸ್ಯ ಕೆ.ಗೋವಿಂದರಾಜು ಅವರ ಡೈರಿಯಲ್ಲಿದೆ ಎಂಬ ಆರೋಪವನ್ನು ಅರಗಿಸಿಕೊಳ್ಳಲು ಕಾಂಗ್ರೆಸ್‌ಗೆ
ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ. 

ತಮ್ಮೊಂದಿಗಿನ ಸಂಭಾಷಣೆ ವೇಳೆ ಮುಖ್ಯಮಂತ್ರಿಗಳು, ಅವರು (ಬಿಜೆಪಿ) ಕೂಡ ಹೈಕಮಾಂಡ್‌ಗೆ ಹಣ ನೀಡಿಲ್ಲವೇ ಎಂದು ಪ್ರಶ್ನಿಸಿದ್ದರು. ಅಂದರೆ, ಆಡಳಿತಾರೂಢ ಕಾಂಗ್ರೆಸ್‌ ಹೈಕಮಾಂಡ್‌ಗೆ ಹಣ ನೀಡಿದೆ ಎಂಬುದು ಸ್ಪಷ್ಟವಾಗುತ್ತದೆ. ಎಂದು ಅನಂತಕುಮಾರ್‌ ಹೇಳಿದ್ದಾರೆ. ಸವಾಲು ಸ್ವೀಕರಿಸಲು ಸಿದ್ಧ: ಇನ್ನೊಂದೆಡೆ, ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ವರಿಷ್ಠರಿಗೆ 1000 ಕೋಟಿ ರೂ. ನೀಡಿರುವುದು ಮತ್ತು ಉಕ್ಕಿನ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಮತ್ತು ಅವರ
ಶಿಷ್ಯರಿಗೆ 65 ಕೋಟಿ ರೂ. ಸಂದಾಯವಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿರುವ ಮಾಜಿ ಸಿಎಂ ಬಿ.ಎಸ್‌
.ಯಡಿಯೂರಪ್ಪ, ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಹಾಕುವ ಸವಾಲುಗಳನ್ನು ಎದುರಿಸಲು ಸಿದ್ಧವಿರುವುದಾಗಿ
ಹೇಳಿದ್ದಾರೆ.

ವೀಡಿಯೋ ತಿರುಚಿರುವ ಕಾಂಗ್ರೆಸ್‌: ಗೋ.ಮಧುಸೂಧನ್‌ ಹೈಕಮಾಂಡ್‌ಗೆ ಹಣ ಸಂದಾಯ ಮಾಡುವ ಕುರಿತು ಸಿದ್ದರಾಮಯ್ಯ ತಮ್ಮೊಂದಿಗೆ ನಡೆಸಿದ ಮಾತುಕತೆ ವಿವರಗಳನ್ನು ಕೇಂದ್ರ ಸಚಿವ ಅನಂತಕುಮಾರ್‌ ಅವರು ಬಿ.ಎಸ್‌ .ಯಡಿಯೂರಪ್ಪ ಅವರೊಂದಿಗೆ ಹಂಚಿಕೊಂಡಿದ್ದನ್ನು ತಿರುಚಿ, ಅವರಿಬ್ಬರ ವಿರುದ್ಧವೇ ಆರೋಪ ಮಾಡುತ್ತಿರುವ ಕಾಂಗ್ರೆಸ್‌ ಆತಂಕಕ್ಕೆ ಒಳಗಾಗಿ ಹೇಳಿಕೆ ನೀಡುತ್ತಿದೆ ಎಂದು ಬಿಜೆಪಿ ವಕ್ತಾರ ಗೋ. ಮಧುಸೂಧನ್‌ ಹೇಳಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next