Advertisement

ಅಭ್ಯರ್ಥಿಗಳ ಆಯ್ಕೆ: ಕಾಂಗ್ರೆಸ್‌ ಸಭೆ

09:26 PM Nov 10, 2022 | Team Udayavani |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಉಸ್ತುವಾರಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಅವರು ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಸಭೆ ನಡೆಸಿದರು.

Advertisement

ಬೆಂಗಳೂರು ಉತ್ತರ, ದಕ್ಷಿಣ, ಸೆಂಟ್ರಲ್‌, ಗ್ರಾಮಾಂತರ ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಗೆ ಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾಹಿತಿ ಸಂಗ್ರಹಿಸಲಾಯಿತು.

ಪುಲಕೇಶಿನಗರ ಕ್ಷೇತ್ರದ ಟಿಕೆಟ್‌ ಸಂಬಂಧ ಮಾಜಿ ಮೇಯರ್‌ ಸಂಪತ್‌ರಾಜ್‌ ವಿಚಾರ ಪ್ರಸ್ತಾಪಿಸಲು ಮುಂದಾದಾಗ ಸುರ್ಜೇವಾಲ ತಡೆದರು. ಸರ್‌ ಸಿವಿ ರಾಮನ್‌ ನಗರ ವಿಚಾರದಲ್ಲಿ ನೀವು ಹೇಳಿ ಎಂದು ತಾಕೀತು ಮಾಡಿದರು.

ಪುಲಕೇಶಿ ನಗರಕ್ಕೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಎಂದು ತಿಳಿಸಿದರು ಎಂದು ಹೇಳಲಾಗಿದೆ. ಶುಕ್ರವಾರವೂ ಸಭೆ ಮುಂದುವರಿಯಲಿದ್ದು, ತುಮಕೂರು, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳ ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಿಸಿ ಮಾಹಿತಿ ಸಂಗ್ರಹ ನಡೆಯಲಿದೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next