Advertisement

ನಾಳೆಯಿಂದ ವಿಧಾನಮಂಡಲ ಅಧಿವೇಶನ: ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಸಭೆ

12:47 PM Dec 06, 2020 | keerthan |

ಬೆಂಗಳೂರು: ನಾಳೆಯಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.

Advertisement

ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕಾದ ವಿಚಾರಗಳು, ಸರ್ಕಾರದ ವಿರುದ್ಧ ಪ್ರತಿಭಟನೆ ಅಸ್ತ್ರಗಳನ್ನು ಬಳಕೆ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ವಿಧಾನ ಪರಿಷತ್ ಸಭಾಪತಿ ಬದಲಾವಣೆ ಮಾಡಲು ಮುಂದಾಗಿರುವ ಬಿಜೆಪಿ ವಿರುದ್ಧ ಮಾಡಬೇಕಾದ ತಂತ್ರಗಾರಿಕೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ರಮೇಶ್ ಕುಮಾರ್, ಎಚ್.ಕೆ. ಪಾಟೀಲ್, ಕೆ.ಜೆ.ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಎಚ್ ಎಂ ರೇವಣ್ಣ, ನಾರಾಯಣ ಸ್ವಾಮಿ, ಜಮೀರ್ ಅಹಮದ್ ಖಾನ್, ಯು.ಟಿ ಖಾದರ್ ಭಾಗವಹಿಸಿದ್ದಾರೆ.

ಇದನ್ನೂ ಓದಿ:ಆರ್ ಎಸ್ಎಸ್ ನ ಮುಖವಾಣಿಯಾಗಿ ಬಿಜೆಪಿ ನಾಯಕರು ಕೆಲಸ ಮಾಡುತ್ತಿದ್ದಾರೆ: ನಾರಾಯಣ ಸ್ವಾಮಿ

Advertisement
Advertisement

Udayavani is now on Telegram. Click here to join our channel and stay updated with the latest news.

Next