Advertisement

ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ.!

12:44 PM Feb 22, 2022 | Team Udayavani |

ಕುರುಗೋಡು : ಸಚಿವ ಕೆಎಸ್‌ ಈಶ್ವರಪ್ಪ ಕೆಂಪು ಕೋಟೆಯ ಮೇಲೆ ಭಗವಾದ್ವಜಾ ಹಾರಲಿದೆ ಎಂದು ಹೇಳುವ ಮೂಲಕ ರಾಷ್ಟ್ರದ ಧ್ವಜಕ್ಕೆ ಅವಮಾನ ಮಾಡಿದ್ದಾರೆ, ಈ ಕಾರಣಕ್ಕಾಗಿ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಕುರುಗೋಡು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ರಾಘವೇಂದ್ರ ರಾವ್ ಅವರಿಗೆ ಮನವಿ ಸಲ್ಲಿಸಿದರು.

Advertisement

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಗಿ ಮಲ್ಲಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷ ಗಾದಿಲಿಂಗಪ್ಪ ಈಶ್ವರಪ್ಪ ಸಂವಿದಾನ ವಿರೋಧಿಯಾಗಿ ನಡೆದುಕೊಂಡಿದ್ದಾರೆ. ನಾವೆಲ್ಲ ರಾಷ್ಟ್ರ ಧ್ವಜಕ್ಕೆ ಸೆಲ್ಯೂಟ್ ಹೊಡೆದು ಗೌರವಿಸುತ್ತೇವೆ. ಇಂಥದರಲ್ಲಿ ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.

ಬಿಜೆಪಿ ಬ್ರಿಟಿಷರ ಚೇಲಾ ಆಗಿದ್ದರು. ಅವರು ಸ್ವತಂತ್ರ್ಯ ಹೋರಾಟ ಮಾಡಿಯೇ ಇಲ್ಲ. ಅವರು ರಾಷ್ಟ್ರ ದ್ರೋಹಿಗಳು, ಕಳ್ಳರು, ಸುಳ್ಳರು ಎಂದು ಬಿಜೆಪಿಯನ್ನು ಟೀಕಿಸಿದರು.

ಈಶ್ವರಪ್ಪ ಜಾತಿ ವಿಷ ಬೀಜ ಬಿತ್ತಿದ್ದಾರೆ, ರಾಷ್ಟ್ರ ಪ್ರೇಮ ಬಿಂಬಿಸುವ ನಾವೆಲ್ಲ ಗೌರವಿಸುವ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದರು. ಬಿಜೆಪಿಯವರು ರಾಷ್ಟ್ರ ಭಕ್ತರು ಎಂದು ಹೇಳುತ್ತಾರೆ, ಅವರಿಗೆ ರಾಷ್ಟ್ರ ಭಕ್ತಿಯ ಮಾತನಾಡಲು ನಾಚಿಕೆಯಾಗಬೇಕೆಂದು ಟೀಕಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಪುರಸಭೆ ಸದಸ್ಯರು ಪಾಲ್ಗೊಂಡಿದ್ದರು.

Advertisement

ಇದನ್ನೂ ಓದಿ : ಹರ್ಷ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಸೈದಾಪುರ ಬಂದ್

Advertisement

Udayavani is now on Telegram. Click here to join our channel and stay updated with the latest news.

Next