Advertisement

BJP ಸಂಸದ ಕಾಗೇರಿ ಅವರನ್ನು ಅಭಿನಂದಿಸಿದ ಕಾಂಗ್ರೆಸ್ ಶಾಸಕ ಭೀಮಣ್ಣ!

11:22 PM Jul 12, 2024 | Team Udayavani |

ಶಿರಸಿ: ಬಿಜೆಪಿಯ ನೂತನ ಸಂಸದ ವರ್ಷದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಾಂಗ್ರೆಸ್ ಶಾಸಕ ಭೀಮಣ್ಣ ಟಿ ನಾಯ್ಕ ಶುಕ್ರವಾರ ರಾತ್ರಿ ಭೇಟಿ‌ ಮಾಡಿ ಅಭಿನಂದಿಸಿದ ಘಟನೆ ಶಿರಸಿಯಲ್ಲಿ ನಡೆಯಿತು.

Advertisement

ಸಂಸದರ ಗೃಹ ಕಚೇರಿಗೆ ತೆರಳಿ ಕಾಗೇರಿ ಅವರಿಗೆ ಹಾರ ಹಾಕಿ, ಫಲ‌ ನೀಡಿ ಅಭಿನಂದಿಸಿದರು‌. ಈ ಸಂದರ್ಭದಲ್ಲಿ ಶಾಸಕರು ಹಾಗೂ ಸಂಸದರು ಕ್ಷೇತ್ರದ ಅಭಿವೃದ್ದಿಗಾಗಿ ಜೋಡೆತ್ತಿನಂತೆ ಕೆಲಸ ಮಾಡುವ ಬಗ್ಗೆ ಅಭಿಮತ ವ್ಯಕ್ತಪಡಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ್ರು, ಅಬ್ಬಾಸ‌ ತೋನ್ಸೆ, ಎಸ್.ಕೆ.ಭಾಗವತ, ಪ್ರದೀಪ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next