Advertisement

ಪ್ರತಿಭಟನೆ ಲೂಟಿಯಲ್ಲಿ ಮುಕ್ತಾಯ: ಕಾಂಗ್ರೆಸ್‌ ಶಾಸಕನ ವಿರುದ್ಧ ಕೇಸು

07:11 PM Nov 12, 2022 | Team Udayavani |

ಭೋಪಾಲ್‌: ರಸಗೊಬ್ಬರ ನೀಡುವಂತೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆ ಲೂಟಿಯಲ್ಲಿ ಮುಕ್ತಾಯಗೊಂಡಿದೆ. ಪ್ರಕರಣ ಸಂಬಂಧ ಕಾಂಗ್ರೆಸ್‌ನ ಶಾಸಕ ಮನೋಜ್‌ ಚಾವ್ಲಾ ಸೇರಿದಂತೆ ಹಲವರ ವಿರುದ್ಧ ಕೇಸು ದಾಖಲಾಗಿದೆ.

Advertisement

ರತ್ನಾಂ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರ ಸರಿಯಾಗಿ ವಿತರಣೆಯಾಗುತ್ತಿಲ್ಲವೆಂದು ರೈತರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅಲೋಟ್‌ ಕ್ಷೇತ್ರದ ಶಾಸಕ ಮನೋಜ್‌ ಚಾವ್ಲಾ ಮತ್ತು ಕಾಂಗ್ರೆಸ್‌ ಮುಖಂಡ ಯೋಗೇಂದ್ರ ಸಿಂಗ್‌ ಜಾಡೋನ್‌ ಮತ್ತು ಇತರರು ರಸಗೊಬ್ಬರ ವಿತರಣಾ ಕೇಂದ್ರಕ್ಕೆ ನುಗ್ಗಿ ಮನಬಂದಂತೆ ಬೇಕಾದವರಿಗೆ ಯೂರಿಯಾ ವಿತರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸ್ಥಳೀಯ ಮಟ್ಟದಲ್ಲಿ ವೈರಲ್‌ ಆಗಿದೆ. ಈ ನಡುವೆ, ಜಿಲ್ಲಾಡಳಿತ ಪ್ರತಿಕ್ರಿಯೆ ನೀಡಿದ್ದು, ರಸಗೊಬ್ಬರದ ಕೊರತೆ ಇಲ್ಲವೆಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next