Advertisement

Congress: ಆರೋಗ್ಯ ಸಚಿವರ ಪಿಎ ವಿರುದ್ಧ ಕಾಂಗ್ರೆಸ್‌ ಶಾಸಕ ಅಸಮಾಧಾನ

11:24 PM Oct 07, 2023 | Team Udayavani |

ಬೆಂಗಳೂರು: ಸಚಿವರ ಕಾರ್ಯವೈಖರಿ ವಿರುದ್ಧ ಸಿಎಂಗೆ ಕೆಲವು ಶಾಸಕರು ಪತ್ರ ಬರೆದಿದ್ದ ಬೆನ್ನಲ್ಲೇ ಸಚಿವರ ಆಪ್ತ ಕಾರ್ಯದರ್ಶಿ ವಿರುದ್ಧ ಆಡಳಿತ ಪಕ್ಷದ ಮತ್ತೋರ್ವ ಶಾಸಕರು ಪತ್ರ ಸಮರ ಸಾರಿದ್ದು, ಸರಕಾರವನ್ನು ಮುಜುಗರಕ್ಕೀಡು ಮಾಡಿದೆ.

Advertisement

ಬೀಳಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಜೆ.ಟಿ. ಪಾಟೀಲ್‌ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ಪತ್ರ ಬರೆದಿದ್ದು, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ವಿರುದ್ಧ ಕ್ರಮ ಕೈಗೊಳ್ಳಲು ಹಕ್ಕು ಬಾಧ್ಯತಾ ಸಮಿತಿಗೆ ಶಿಫಾರಸು ಮಾಡುವಂತೆ ಕೋರಿದ್ದಾರೆ.

ಪತ್ರದಲ್ಲಿ ಏನಿದೆ?
ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ಅವರನ್ನು ವಿಕಾಸಸೌಧದಲ್ಲಿ ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಹೇಳಿಕೊಂಡಿದ್ದೆ. ಆದರೆ, ಅದಕ್ಕವರು ಸರಿಯಾಗಿ ಸ್ಪಂದಿಸಿರಲಿಲ್ಲ. ಜನಪ್ರತಿನಿಧಿಗಳ ಜತೆ ಅವರ ಸ್ಪಂದನೆ ಸರಿಯಾಗಿ ಇರುವುದಿಲ್ಲ. ಇಲಾಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಕೇಳಿದರೂ ಸರಿಯಾಗಿ ಮಾಹಿತಿ ಕೊಟ್ಟಿರುವುದಿಲ್ಲ. ಇವರ ವರ್ತನೆ ಧಿಮಾಕು ಅತಿ ಒರಟುತನದಿಂದ ಕೂಡಿರುತ್ತದೆ. ಈ ವಿಷಯದ ಬಗ್ಗೆ ಅವರಿಂದ ವಿಷಾದದ ವಿಚಾರಗಳಿಲ್ಲ. ಆದ್ದರಿಂದ ನನಗೆ ಬಹಳ ನೋವಾಗಿರುತ್ತದೆ. ಅದಕ್ಕಿಂತ ಹೆಚ್ಚಾಗಿ ನನ್ನ ಮತಕ್ಷೇತ್ರದ ಕೆಲಸಕ್ಕೆ ತೊಂದರೆ ಮಾಡಿರುವುದರಿಂದ ಅವರ ಮೇಲೆ ಹಕ್ಕುಬಾಧ್ಯತಾ ಸಮಿತಿಗೆ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next