Advertisement
ನಗರದ ಮಧ್ಯಭಾಗದಲ್ಲಿದ್ದ ತಾಜ್ ವಿವಾಂತ್ ಹೊಟೇಲ್ನಲ್ಲಿ ಯಾವುದೇ ರೀತಿಯ ಮುಕ್ತ ವಾತಾವರಣ ಇಲ್ಲದ್ದರಿಂದ ಕಳೆದ ಐದು ದಿನಗಳಿಂದ ಹೊಟೇಲ್ನಲ್ಲಿ ಉಳಿದುಕೊಂಡಿದ್ದ ಶಾಸಕರು ಪಕ್ಷದ ನಾಯಕರ ಮುಂದೆ ಅಸಮಾಧಾನ ಹೊರ ಹಾಕಿದ್ದರು.
Related Articles
ಈ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ದೆಹಲಿಗೆ ತೆರಳಿದ್ದರಿಂದ ಅವರಿಂದ ಕೋರ್ಟ್ ಕಲಾಪದ ಪ್ರತಿ ಕ್ಷಣದ ಮಾಹಿತಿಯನ್ನು ನಾಯಕರು ಪಡೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.
Advertisement
ಸಂಗಮೇಶ್ ಹೊರಹೋಗುವ ವದಂತಿ: ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ನ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ರೆಸಾರ್ಟ್ನಿಂದ ಹೊರ ಹೋಗಲು ಪ್ರಯತ್ನಿಸಿದ್ದರು ಎಂಬ ವದಂತಿ ಹರಡಿತ್ತು. ಈ ಸುದ್ದಿ ಹರಡಿದ ಕೆಲವೇ ಕ್ಷಣಗಳಲ್ಲಿ ಬಿ.ಕೆ. ಸಂಗಮೇಶ ಸ್ಪಷ್ಟನೆ ನೀಡಿದ್ದು, ನಾನು ರೆಸಾರ್ಟ್ನಿಂದ ಹೊರಗೆ ಹೋಗುವ ಪ್ರಯತ್ನ ಮಾಡಿಲ್ಲ. ನಾನು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ನಲ್ಲಿಯೇ ಉಳಿಯುತ್ತೇನೆ. ನನಗೆ ಬಿಜೆಪಿಯಿಂದ ಯಾವುದೇ ಕರೆ ಬಂದಿಲ್ಲ. ಗುರುವಾರ ಬೆಳಿಗ್ಗೆವರೆಗೂ ರೆಸಾರ್ಟ್ನಲ್ಲಿಯೇ ಉಳಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಕೆ ಗೆಸ್ಟ್ ಹೌಸ್ನಲ್ಲಿ ವೇಣುಗೋಪಾಲ್: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಒಂದು ವಾರದದಿಂದ ಕುಮಾರಕೃಪಾ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದು, ಗುರುವಾರ ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆ ಇರುವುದರಿಂದ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಗಂಟೆಗೊಮ್ಮೆ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹೋಗುತ್ತಿದ್ದಾರೆ.