Advertisement

ಕಾಂಗ್ರೇಸ್ ಸಂಸದ ಶಶಿ ತರೂರ್ ಸೇರಿ ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು..!

12:41 PM Jan 29, 2021 | Team Udayavani |

ನೊಯ್ಡಾ :  ಜನವರಿ 26ರ ಗಣರಾಜ್ಯೋತ್ಸವದ ದಿನದಂದು ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪರೇಡ್ ಗೆ ಸಂಬಂಧಿಸಿದಂತೆ ಕಾಂಗ್ರೇಸ್ ಸಂಸದ ಶಶಿ ತರೂರ್ ಹಾಗೂ ಆರು ಮಂದಿ ಹಿರಿಯ ಪತ್ರಕರ್ತರ ವಿರುದ್ಧ ದೂರು ದಾಖಲಾಗಿದೆ.

Advertisement

ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್, ಹಿಂಸಾಚಾರಕ್ಕೆ ತಿರುಗಲು ಈ ಏಳು ಮಂದಿ ಸಾಮಾಜಿಕ ಮಾಧ್ಯಮಗಳಲ್ಲಿ, ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳು ಹಾಗೂ ಪೋಸ್ಟ್ ಗಳು ಕಾರಣವೆಂದು ಸ್ಥಳಿಯರೊಬ್ಬರು ನೀಡಿದ ದೂರಿನ ಅನ್ವಯ ನೊಯ್ಡಾ  ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ಓದಿ : ಬಹಿರಂಗಗೊಂಡಿದೆ ರಿಯಲ್ ಮಿ ಎಕ್ಸ್ 7 5ಜಿ ಮತ್ತು ರಿಯಲ್ ಮಿ ಎಕ್ಸ್ 7 ಪ್ರೊ 5ಜಿ ಗಳ ಫೀಚರ್ಸ್

ಹಿರಿಯ ಪತ್ರಕರ್ತರಾದ ಮೃಣಾಲ್ ಪಾಂಡೆ, ರಾಜದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಅಘ, ಪರೇಶ್ ನಾಥ್ ಹಾಗೂ ಅನಂತ್ ನಾಥ್ ಅವರನ್ನೊಳಗೊಂಡು ಒಬ್ಬ ಅಪರಿಚಿತ ವ್ಯಕ್ತಿಯ ಮೇಲೂ ಎಫ್ ಐ ಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನೊಯ್ಡಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್‌ ಗಳಾದ 124 ಎ (ದೇಶದ್ರೋಹ), 295 ಎ (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), 506 (ಕ್ರಿಮಿನಲ್ ಬೆದರಿಕೆ), 34 ( ಆ್ಯಕ್ಟ್ ಡನ್ ಬೈ ಸೆವೆರಲ್ ಫರ್ದರೆನ್ಸ್ ಆಫ್ ಕಾಮನ್ ಇನ್ ಟೆನ್ಶನ್ ), 120 ಬಿ (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next