Advertisement

ಕಾಂಗ್ರೆಸ್ ತನ್ನ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು: CM ಕುಮಾರಸ್ವಾಮಿ

01:01 PM Jan 14, 2019 | Sharanya Alva |

ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ಕಾಲಿಡಬೇಕೆಂದು ಮೈತ್ರಿ ಮಾಡಿಕೊಂಡದ್ದು. ನಮ್ಮ ಉದ್ದೇಶವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ನಾವು(ಜೆಡಿಎಸ್) 3ನೇ ದರ್ಜೆಯ ನಾಗರಿಕರಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಅವರು ಮೈತ್ರಿ ಸರ್ಕಾರದ ಕುರಿತ ಕೆಲವು ವಿಷಯಗಳನ್ನು ಹೊರಹಾಕಿದ್ದಾರೆ.

ಕಾಂಗ್ರೆಸ್ ನವರು ನಮ್ಮನ್ನು 3ನೇ ದರ್ಜೆಯವರಂತೆ ನೋಡುತ್ತಿದೆ. ಹೀಗಾಗಿ ಕಾಂಗ್ರೆಸ್ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಕಾಂಗ್ರೆಸ್ ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಅತೀಯಾದ ಆತ್ಮವಿಶ್ವಾಸದಿಂದ ಮುನ್ನುಗ್ಗಿದ್ರೆ ಸೋಲು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಪಕ್ಷದವರು ನಮ್ಮನ್ನು(ಜೆಡಿಎಸ್) ಗೌರವದಿಂದ ನೋಡಿಕೊಳ್ಳಬೇಕು. ಲೋಕಸಭೆ ಚುನಾವಣೆಗೂ ಕೂಡಾ ಸೀಟು ಹಂಚಿಕೆಗೆ 1:3 ಸೂತ್ರದಡಿ ಆಗಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next