Advertisement

ಜೋಡೊ ಯಾತ್ರೆ ಯಶಸ್ಸಿನಿಂದ ಕಾಂಗ್ರೆಸ್‌ ಸುಮ್ಮನಾಗಬಾರದು: ನಿತೀಶ್‌

10:18 PM Feb 18, 2023 | Team Udayavani |

ಪಟ್ನಾ: ರಾಹುಲ್‌ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಭಾರತ್‌ ಜೋಡೊ ಯಾತ್ರೆಯ ಯಶಸ್ಸಿನಿಂದ ಕಾಂಗ್ರೆಸ್‌ ಸುಮ್ಮನೇ ಕುಳಿತುಕೊಳ್ಳಬಾರದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ಪ್ರತಿಪಕ್ಷಗಳನ್ನು ಒಗ್ಗೂಡಿಸಿ, ಒಗ್ಗಟ್ಟಾಗಿ ಸ್ಪರ್ಧಿಸುವ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸಲಹೆ ನೀಡಿದರು.

Advertisement

ಸಿಪಿಐ ಲಿಬಿರೇಷನ್‌ ವತಿಯಿಂದ ಬಿಹಾರದ ಪಾಟ್ನಾದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪ್ರತಿಪಕ್ಷಗಳು ಒಗ್ಗಟ್ಟಾಗಿ ಸ್ಪರ್ಧಿಸಿದರೆ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಸ್ಥಾನಗಳ ಸಂಖ್ಯೆ 100ಕ್ಕಿಂತಲೂ ಕಡಿಮೆಯಾಗಲಿದೆ,’ ಎಂದರು.

ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಹಿರಿಯ ನಾಯಕ ಸಲ್ಮಾನ್‌ ಖುರ್ಷಿದ್‌ ಅವರು ನಿತೀಶ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಕಾಂಗ್ರೆಸ್‌ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸಬೇಕೆಂದು ನೀವು ಬಯಸುತ್ತೀರಿ.

ನಿಮ್ಮ ಭಾವನೆಗಳು ನಮಗೆ ಅರ್ಥ ಆಗುತ್ತದೆ. ಆದರೆ ಇದು ಹೇಗಿದೆ ಎಂದರೆ, ಪ್ರೀತಿಯಲ್ಲಿ ಬಿದ್ದ ಇಬ್ಬರು ಪ್ರೇಮಿಗಳು ಮೊದಲು “ಐ ಲವ್‌ ಯು’ ಎಂದು ಯಾರು ಹೇಳಬೇಕೆಂದು ನಿರ್ಧರಿಸಲು ಸಮಯ ತೆಗೆದುಕೊಂಡಂತೆ,’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next