Advertisement
ರಾಷ್ಟ್ರಪತಿ ಭಾಷಣದ ಬಗ್ಗೆ ವಂದನಾರ್ಪಣೆ ಚರ್ಚೆಯ ವೇಳೆ ಹಲವು ಆರೋಪಗಳಿಗೆ ಉತ್ತರಿಸಿದ ಪ್ರಧಾನಿ ಮೋದಿ ಗಾಂಧಿ ಕುಟುಂಬದ ವಿರುದ್ದ ಕಿಡಿ ಕಾರಿದರು .’ಕಾಂಗ್ರೆಸ್ಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯಾವುದೇ ಹಕ್ಕು ಇಲ್ಲ’ ಎಂದರು.
Related Articles
Advertisement
‘ಪ್ರಜಾಪ್ರಭುತ್ವಕ್ಕೆ ನೆಹರು ಕೊಡುಗೆ ಏನು’ ಎಂದು ಪ್ರಶ್ನಿಸಿದ ಮೋದಿ ‘ಸರ್ದಾರ್ ಪಟೇಲ್ ಅವರು ಬಹುಮತ ಪಡೆದಿದ್ದರೂ ಅವರನ್ನು ಪ್ರಧಾನಿಯಾಗಲು ಬಿಡಲಿಲ್ಲ’ ಎಂದು ಆರೋಪಿಸಿದರು.
‘ಸರ್ದಾರ್ ಪಟೇಲ್ ಅವರು ಮೊದಲ ಪ್ರಧಾನಿಯಾಗಿದ್ದರೆ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುತ್ತಿದ್ದರು. ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಿರುತ್ತಿತ್ತು’ ಎಂದರು.
‘ಕಾಂಗ್ರೆಸ್ ಯಾವ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಿದೆ. ಹೈದರಾಬಾದ್ ವಿಮಾನನಿಲ್ದಾಣದಲ್ಲಿ ಸ್ವಾಗತಕ್ಕೆ ಬಂದಿದ್ದ ದಲಿತ ನಾಯಕನನ್ನು ರಾಜೀವ್ ಗಾಂಧಿ ಸಾರ್ವಜನಿಕವಾಗಿ ಕಡೆಗಣಿಸಿದ್ದರಲ್ಲ ಅದೆಯಾ ಕಾಂಗ್ರೆಸ್ ಪ್ರಜಾಪ್ರಭುತ್ವ’ ಎಂದು ಪ್ರಶ್ನಿಸಿದರು.
‘ದೇಶಕ್ಕೆ ಜವಹಾರ್ ಲಾಲ್ ನೆಹರು ಪ್ರಜಾಪ್ರಭುತ್ವ ತಂದರು ಎಂದು ಕಾಂಗ್ರೆಸ್ ಪಕ್ಷ ಸೊಕ್ಕಿನಿಂದಲೊ ಇಲ್ಲ ಜ್ಞಾನದ ಕೊರತೆಯಿಂದ ಹೇಳುತ್ತಿದೆಯೋ ನನಗೆ ಗೊತ್ತಿಲ್ಲ , ಆದರೆ ಭಾರತದಲ್ಲಿ ಲಿಚ್ವಿ ರಾಜ್ಯಭಾರ ಮತ್ತು ಗೌತಮ ಬುದ್ಧನ ಕಾಲದಲ್ಲೂ ಪ್ರಜಾಪ್ರಭುತ್ವ ಇತ್ತು’ ಎಂದರು.