Advertisement

ಲೋಕಸಭೆಯಲ್ಲಿ ಚೌಧರಿ ಕೈ ನೇತೃತ್ವ?

10:51 AM Jun 20, 2019 | mahesh |

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನ ಏಕೈಕ ಸಂಸದ ಅಧೀರ್‌ ರಂಜನ್‌ ಚೌಧರಿ ಅವರನ್ನು ಲೋಕಸಭೆಯ ಕಾಂಗ್ರೆಸ್‌ ನಾಯಕರನ್ನಾಗಿ ಆರಿಸಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

Advertisement

ಈ ಬಗ್ಗೆ ಪಕ್ಷದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಅತ್ತ, ಚೌಧರಿಯವರೂ ಇದನ್ನು ಖಚಿತಪಡಿಸಿಲ್ಲ. ಲೋಕಸಭೆ ಕಾಂಗ್ರೆಸ್‌ ನಾಯಕ ಸ್ಥಾನವನ್ನು ವಹಿಸುವ ವಿಚಾರದಲ್ಲಿ ಅಧ್ಯಕ್ಷ ರಾಹುಲ್ಗಾಂಧಿ ಹಿಂದೆ ಸರಿದ ಕಾರಣ ಚೌಧರಿ ಅವರಿಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

ಏಕೈಕ ಸಂಸದ : ಈ ಬಾರಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಬೆರ್ಹಂಪೋರ್‌ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ. 1999ರಿಂದ ಸತತವಾಗಿ ಆಯ್ಕೆಯಾಗುತ್ತಿರುವ ಅವರು, ಈ ಬಾರಿ ಅಲ್ಲಿಂದ ಆಯ್ಕೆಯಾದ ಒಬ್ಬರೇ ಒಬ್ಬ ಕಾಂಗ್ರೆಸ್‌ ಸಂಸದ. ಪಶ್ಚಿಮ ಬಂಗಾಳ ಕಾಂಗ್ರೆಸ್‌ನ ಅಧ್ಯಕ್ಷರೂ ಆಗಿದ್ದ ಅವರು, ಯುಪಿಎ ಸರ್ಕಾರವಿದ್ದಾಗ ಸಚಿವರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next