Advertisement

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

01:36 AM Sep 25, 2024 | Team Udayavani |

ಬೆಂಗಳೂರು: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ಬುಧವಾರ (ಸೆ. 25) ಸಿಎಂ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆಂಬ ಸುದ್ದಿ ಪಕ್ಷದ ಶಾಸಕರ ವಲಯದಲ್ಲಿ ಹರಿದಾಡಿತು. ಆದರೆ ಅಂತಹ ಯಾವುದೇ ಸಭೆ ಕರೆದಿಲ್ಲ ಎಂದು ಸರಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಸಿಎಂ ಕಾರ್ಯಕ್ರಮಗಳು ಪೂರ್ವನಿಗದಿಯಂತೆ ನಡೆಯಲಿವೆ, ಬುಧವಾರ ಕೇರಳಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಅದೇ ರೀತಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿ ಈ ಬೆಳವಣಿಗೆಗಳ ಕುರಿತು ಪಕ್ಷದ ಮುಖಂಡರೊಂದಿಗೆ ಸಮಾ ಲೋಚನೆ ನಡೆಸಲಿದ್ದಾರೆ ಎಂದೂ ಹೇಳಲಾಗಿತ್ತು. ಆದರೆ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನ ಸಭಾ ಚುನಾವಣೆಯಲ್ಲಿ ವ್ಯಸ್ತರಾಗಿರುವುದ ರಿಂದ ಸದ್ಯಕ್ಕೆ ರಾಜ್ಯ ಭೇಟಿ ಇಲ್ಲ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಕಾವೇರಿ ನಿವಾಸದಲ್ಲಿ ಚರ್ಚೆ
ಹೈಕೋರ್ಟ್‌ ತೀರ್ಪು ಹೊರಬಿದ್ದ ಸ್ವಲ್ಪ ಹೊತ್ತಿನಲ್ಲಿ ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಹತ್ತಕ್ಕೂ ಹೆಚ್ಚು ಸಚಿವರು ಸಿಎಂ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next