Advertisement

ಕಾಂಗ್ರೆಸ್‌ಗೆ ಕತ್ತೆಯೂ ಹೋಗಲ್ಲ: ಕಟೀಲ್‌

10:54 AM Mar 08, 2020 | Sriram |

ಬಾಗಲಕೋಟೆ: “ಇಡೀ ದೇಶದಲ್ಲಿ ಕಾಂಗ್ರೆಸ್‌ ಮುಳುಗುತ್ತಿದೆ. ಆ ಪಕ್ಷಕ್ಕೆ ಕತ್ತೆಯೂ ಹೋಗದಂತಹ ಸ್ಥಿತಿ ಇದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.

Advertisement

ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ, ರಾಷ್ಟ್ರೀಯ ಪಕ್ಷವಾಗಿರುವ ಕಾಂಗ್ರೆಸ್‌ಗೆ ಒಬ್ಬ ರಾಜ್ಯಾಧ್ಯಕ್ಷರನ್ನೂ ನೇಮಕ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ನ ಪರಿಸ್ಥಿತಿ ಏನಾಗಿದೆ ಎಂಬುದು ಇಡೀ ರಾಜ್ಯದ ಜನರಿಗೆ ತಿಳಿದಿದೆ. ಹಿಂದೆ ಕಾಂಗ್ರೆಸ್‌ ಪಕ್ಷದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಸೋನಿಯಾ, ರಾಹುಲ್‌ಗೆ ಜೈ ಎಂಬ ಘೋಷಣೆ ಕೇಳುತ್ತಿತ್ತು.

ಆದರೆ, ಈಗ ಭಾರತಾಂಬೆಗೆ ಜೈಕಾರ ಕೇಳುತ್ತಿವೆ. ಇಂತಹ ವಾತಾವರಣ ನಿರ್ಮಿಸಿದ್ದು ನಮ್ಮ ಹೆಮ್ಮೆಯ ಪ್ರಧಾನಿ ಮೋದಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next