Advertisement

ಕಾಂಗ್ರೆಸ್‌ ಪಾದಯಾತ್ರೆ ನಾಟಕ: ಸಚಿವ ಅಂಗಾರ

10:39 PM Jan 10, 2022 | Team Udayavani |

ಮಂಗಳೂರು: ಅಧಿಕಾರ ಇರುವಾಗ ಮೇಕೆದಾಟು ಯೋಜನೆಗೆ ಸಮರ್ಪಕ ಡಿಪಿಆರ್‌ ಸಲ್ಲಿಸದೆ ಕಾಲಹರಣ ಮಾಡಿದ ಕಾಂಗ್ರೆಸ್‌ ಈಗ ಪಾದಯಾತ್ರೆ ನಾಟಕ ಮಾಡುತ್ತಿದೆ. ರಾಜಕೀಯ ಲಾಭಕ್ಕಾಗಿ ಕೊರೊನಾ ನಿಯಮವನ್ನೂ ಉಲ್ಲಂಘಿಸಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್‌ ಜನತೆಯ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ಮೀನುಗಾರಿಕೆ ಸಚಿವ ಎಸ್‌.ಅಂಗಾರ ಟೀಕಿಸಿದ್ದಾರೆ.

Advertisement

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು “ಮೇಕೆದಾಟು ಯೋಜನೆಯ ವಾಸ್ತವಾಂಶಗಳನ್ನು ಕಾಂಗ್ರೆಸ್‌ ಮರೆಮಾಚಿ ಜನತೆಗೆ ತಪ್ಪು ಸಂದೇಶ ನೀಡುತ್ತಿದೆ. ಆದರೆ ರಾಜ್ಯದ ಜನರನ್ನು ಮರುಳು ಮಾಡಲು ಸಾಧ್ಯವಿಲ್ಲ. ಆಡಳಿತ ಇರುವಾಗ ಕಾಂಗ್ರೆಸ್‌ ನಾಯಕರು ಯಾವುದೇ ಬದ್ಧತೆ ಪ್ರದರ್ಶಿಸಿಲ್ಲ ಎನ್ನುವುದನ್ನು ಜನತೆ ಅರಿತಿದ್ದಾರೆ.

ಇದನ್ನೂ ಓದಿ:2021 ಜುಲೈ-ಸೆಪ್ಟೆಂಬರ್‌ನಲ್ಲಿ 3.10 ಕೋಟಿ ನವೋದ್ಯೋಗ : ಕೇಂದ್ರ ಕಾರ್ಮಿಕ ಸಚಿವಾಲಯ ಮಾಹಿತಿ

ಯೋಜನೆ ಬಗ್ಗೆ ವಿಳಂಬ ನೀತಿ ಅನುಸರಿಸಿ ಈಗ ಕಾನೂನು ಮೀರಿ ಪಾದಯಾತ್ರೆ ನಾಟಕ ಮಾಡುತ್ತಿರುವ ಕಾಂಗ್ರೆಸ್‌ ನಾಯಕರನ್ನು ಜನತೆ ಕ್ಷಮಿಸುವುದಿಲ್ಲ’ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next