Advertisement

ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಗಂಗೋತ್ರಿ: ಸಿಎಂ ಬೊಮ್ಮಾಯಿ

04:41 PM Apr 14, 2022 | Team Udayavani |

ಬೆಂಗಳೂರು: ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಮೊದಲು ಆರಂಭಿಸಿದ್ದು ಕಾಂಗ್ರೆಸ್. ಎಸ್ ಸಿ- ಎಸ್ ಟಿ ಹಾಸಿಗೆ ದಿಂಬಿಲ್ಲೂ ಭ್ರಷ್ಟಾಚಾರ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಗಂಗೋತ್ರಿ ಎಂದು ಇಡೀ ದೇಶಕ್ಕೆ ಗೊತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಧರಣಿ ಮಾಡಲು ಎಲ್ಲರಿಗೂ ಹಕ್ಕಿದೆ. ಆದರೆ ಪ್ರಶ್ನೆ ಏನಂದರೆ ಕಾಂಗ್ರೆಸ್ ಗೆ ಧರಣಿ ಮಾಡುವ ನೈತಿಕ ಹಕ್ಕಿಲ್ಲ. ಹಲವಾರು ಪ್ರಕರಣಗಳಲ್ಲಿ ಅವರ ಸರ್ಕಾರದಲ್ಲಿ ಅವರು ನಡೆದುಕೊಂಡ ರೀತಿಯನ್ನು ಅತ್ಮಾವಲೋಕನ ಮಾಡಿಕೊಳ್ಳಲಿ. ಬೇರೆ ಬೇರೆ ಸಂದರ್ಭದಲ್ಲಿ ಅವರು ಏನು ಮಾಡಿದ್ದಾರೆಂದು ಜನರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರು ಸಂತೋಷ್ ಪ್ರಕರಣದಲ್ಲಿ ರಾಜಕೀಯ ಲಾಭ ಮಾಡಲು ಹೊರಟಿದ್ದಾರೆ ಎಂದರು.

ಇದನ್ನೂ ಓದಿ:ಈಶ್ವರಪ್ಪ ಬಗ್ಗೆ ಸಾಫ್ಟ್‌ ಕಾರ್ನರ್‌ ಇಲ್ಲ, ಮೊದಲು ರಾಜೀನಾಮೆ ನೀಡಲಿ: ಹೆಚ್ ಡಿಕೆ

ಈಶ್ವರಪ್ಪ ಕೇಸ್ ನಲ್ಲಿ ಮಾಹಾನಾಯಕನ ಪಾತ್ರ ಇದೆ ಎಂಬ ರಮೇಶ್ ಜಾರಕಿಹೊಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಅವರು ಯಾರ ಕುರಿತು ಹೇಳಿದ್ದಾರೆ ಗೊತ್ತಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next