Advertisement

ರಾಜ್ಯದಲ್ಲಿ ಕಾಂಗ್ರೆಸ್‌ಗೆ 150 ಸ್ಥಾನ

04:18 PM Dec 11, 2022 | Team Udayavani |

ಚಿಕ್ಕಬಳ್ಳಾಪುರ: ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಸದಸ್ಯವಿನಯ್‌ ಶ್ಯಾಮ್‌ ವಿಶ್ವಾಸ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ಅವರ 77ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸದೃಢವಾಗಿದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿ ರಾಜ್ಯದಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತ್‌ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ ಮುಂದಿನ ದಿನಗಳಲ್ಲಿಗುಜರಾತಿನಲ್ಲಿಯೂ ಸಹ ಕಾಂಗ್ರೆಸ್‌ಪಕ್ಷದ ವಿಜಯದ ಪತಾಕೆಯನ್ನು ಹಾರೈಸುತ್ತೇವೆ ಎಂದರು.

ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಪಕ್ಷದ ನಾಯಕಿಯಾಗಿರುವ ಸೋನಿಯಾಗಾಂಧಿಯವರು ಮಾಡಿರುವಸೇವೆ ಮತ್ತು ಪ್ರಿಯಾಂಕಾ ಗಾಂಧಿ ಅವರು ಪಕ್ಷಸಂಘಟನೆಗೆ ದಕ್ಕಿದ ಗೆಲುವಾಗಿದೆ. ಮುಂದಿನ ದಿನಗಳಲ್ಲಿ ನಡೆವ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಉತ್ತಮ ಪ್ರದರ್ಶನ ನೀಡಲಿದೆ ಎಂದರು.

ಸೋನಿಯಾ ಗಾಂಧಿಯವರಿಗೆ ದೇಶದ ಪ್ರಧಾನಿಯಾಗುವ ಅವಕಾಶ ಸಿಕ್ಕಿದರೂದೇಶ ಮತ್ತು ಪಕ್ಷಕ್ಕಾಗಿ ಅವರು ಉನ್ನತಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅವರಿಗೆ ದೇವರು ಒಳ್ಳೆಯ ಆರೋಗ್ಯ ಆಯಸ್ಸುನೀಡಿ ದೇಶದ ಕೋಟ್ಯಾಂತರ ಜನರ ಸೇವೆ ಮಾಡಲು ಮತ್ತಷ್ಟು ಶಕ್ತಿ ಪ್ರಾಪ್ತವಾಗಲಿ ಎಂದು ಹಾರೈಸಿದರು.

Advertisement

ಕಾಂಗ್ರೆಸ್‌ ಮುಖಂಡ ವಕೀಲ ನಾರಾಯಣಸ್ವಾಮಿ, ಸಮೀವುಲ್ಲಾ, ಬಾಬಾಜಾನ್‌ ಮಮತಾ ಮೂರ್ತಿ, ಸಂತೋಷ್‌, ಮಹೇಂದ್ರ, ಮಹೇಶ್‌, ಗಿರೀಶ್‌, ನಾಯನಹಳ್ಳಿ ನಾರಾಯಣಸ್ವಾಮಿ, ಚಂದ್ರಪ್ಪ, ಶಾಹೀನಾ, ಅಜಿತ್‌ ಪ್ರಸಾದ್‌, ರಮೇಶ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next