Advertisement

Politics: ಮೋದಿ ಸರ್ಕಾರ ಮತ್ತೆ ಬರುತ್ತದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ದಾರೆ :ಸೋಮಣ್ಣ

08:00 PM Feb 08, 2024 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮತ್ತೆ ಬರುತ್ತದೆ ಎಂದು ಕಾಂಗ್ರೆಸ್‌ನವರೇ ಹೇಳುತ್ತಿದ್ಧಾರೆ. ಮತದಾರರಿಗೆ ಬೆದರಿಕೆ ಒಡ್ಡುವ ಕಾರ್ಯ ಆ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ದೂರಿದ್ದಾರೆ.

Advertisement

ವಿಜಯನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಗೋವಿಂದರಾಜನಗರ ಮಂಡಲ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ನನ್ನ ಮನಸ್ಸಿನಲ್ಲಿ ಏನು ಇದೆ ಎಂಬುದು ಕಾರ್ಯಕರ್ತರಿಗೆ ಅರಿವು ಇದೆ. ಮತದಾರರು ಹಾಗೂ ಕಾರ್ಯಕರ್ತರು ನನ್ನ ಜೊತೆಯಲ್ಲಿ ಇದ್ಧಾರೆ ಎಂದು ಹೇಳಿದರು.

ನನ್ನ ತಪ್ಪಿನಿಂದ ನನಗೆ ನೋವಾಗಿದೆ. ಕಾಂಗ್ರೆಸ್‌ 50 ವರ್ಷ ಆಡಳಿತ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷದ ಆಡಳಿತವನ್ನು ವಿಶ್ವವೇ ನೋಡುವಂತಾಗಿದೆ. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 400 ಲೋಕಸಭಾದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸತ್ಯವನ್ನೇ ನುಡಿದಿದ್ಧಾರೆ. ನನಗೆ ಆಗಿರುವ ಅಡೆತಡೆಗಳನ್ನು ದೆಹಲಿಗೆ ಹೋಗಿ ಬಿಜೆಪಿ ರಾಷ್ಟ್ರ ನಾಯಕರಿಗೆ ತಿಳಿಸಿದ್ದೇನೆ. ಉತ್ತಮವಾಗಿ ಸ್ಪಂದಿಸಿದ್ಧಾರೆ ಎಂದು ವಿವರಿಸಿದರು.

ಸಿಪಾಯಿಗಳಂತೆ ಕೆಲಸ ಮಾಡೋಣ:
ಲೋಕಸಭಾ ಚುನಾವಣೆಯಲ್ಲಿ ಸಿಪಾಯಿಗಳಂತೆ ಕೆಲಸ ಮಾಡಬೇಕು. ಯುವ ನಾಯಕ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ರಾಜ್ಯದಲ್ಲಿ ಮಿಂಚಿನ ಸಂಚಾರ ಮಾಡಿ ಸಂಘಟನೆ ಮಾಡುತ್ತಿದ್ಧಾರೆ. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಯುವ ನಾಯಕನ ಸಾರಥ್ಯಕ್ಕೆ ಜಯಸಿಗಲಿದೆ. ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡ, ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿಯುವರೆಗೆ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಿದರು.

ಪದ್ಮಶ್ರೀ ಪುರಸ್ಕೃತ, ವಿಕಲಚೇತನ ರಾಜಣ್ಣ, ಎಂಎಲ್ಸಿ ಅ.ದೇವೇಗೌಡ, ರಾಜ್ಯ ಬಿಜೆಪಿ ಯುವ ಮುಖಂಡ ಡಾ.ಅರುಣ್‌ಸೋಮಣ್ಣ, ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ವಿಜಯನಗರ ಮಂಡಲ ಅಧ್ಯಕ್ಷ ಟಿ.ವಿ.ಕೃಷ್ಣ, ಮಹಿಳಾ ವಿಭಾಗದ ಅಧ್ಯಕ್ಷೆ ರತ್ಮಮ್ಮ, ಬಿಬಿಎಂಪಿ ಮಾಜಿ ಸದಸ್ಯರಾದ ಮೋಹನ್‌ಕುಮಾರ್‌ ದಾಸೇಗೌಡ, ಪಲ್ಲವಿ ಚನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next