Advertisement
ಜ.7ರ ಭಾನುವಾರ ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ಅಯೋಧ್ಯೆ ಶ್ರೀರಾಮ ಕ್ಷೇತ್ರದಿಂದ ಬಂದಿರುವ ಮಂತ್ರಾಕ್ಷತೆ ಮತ್ತು ಕರಪತ್ರವನ್ನು ಮನೆ-ಮನೆಗೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
Related Articles
Advertisement
2017ರಲ್ಲಿ ನಡೆದ ದತ್ತಜಯಂತಿ ಸಂದರ್ಭ ನಡೆದ ಗಲಾಟೆ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್ ಸರ್ಕಾರದ ರಾಜಕೀಯ ನೀತಿ ಪಿಎಫ್ಐ ನಂತಹ ದೇಶ ದ್ರೋಹ, ಭಯೋತ್ಪಾದಕರ ಕೇಸ್ ಗಳನ್ನು ಕ್ಯಾಬಿನೆಟ್ ಗೆ ತಂದು ವಾಪಾಸ್ ಪಡೆಯುವುದು ಎಂದ ಅವರು, ದೇಶಭಕ್ತರು ಇದ್ದರೇ, ರಾಮ ಮಂದಿರಕ್ಕಾಗಿ ಹೋರಾಟ ಮಾಡಿದ್ದಾರೆ. ಅವರ ಕೇಸ್ ರೀ ಓಪನ್ ಮಾಡುವುದು ಎಂದು ಹೇಳಿದರು.
ರಾಜ್ಯದಲ್ಲಿ ವಿದ್ವಾಂಸಕ ಕೃತ್ಯ ನಡೆಸುವ ಸಂಚು ನಡೆದಿದ್ದರೂ, ರಾಜ್ಯ ಸರ್ಕಾರ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಭಯೋತ್ಪಾದಕರನ್ನು, ದೇಶದ್ರೋಹಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತಿದೆ. 2013-17ರ ಸಂದರ್ಭದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅದನ್ನೇ ಮಾಡಿದೆ. 2017ರಲ್ಲಿ ದತ್ತಜಯಂತಿ ಸಂದರ್ಭ ಚಿಕ್ಕಮಗಳೂರು ನಗರದಲ್ಲಿ ಸಿಕ್ಕ ಪೆಟ್ರೋಲ್ ಬಾಂಬ್ ಪ್ರಕರಣ ಮುಚ್ಚಿ ಹಾಕಿದ್ದರಲ್ಲಿ ಆಶ್ಚರ್ಯಪಡಬೇಕಿಲ್ಲ. ಇದು ಕಾಂಗ್ರೆಸ್ ಸ್ವಭಾವ, ಸಿದ್ದರಾಮಯ್ಯನವರ ಸ್ವಭಾವ ಎಂದ ಅವರು, ದೇಶದಲ್ಲಿ ಭಯೋತ್ಪಾದನೆ ಮಟ್ಡಹಾಕಲು ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತದೆ. ಕಾನೂನಾತ್ಮಕ ಮತ್ತು ರಸ್ತೆಯಲ್ಲಿ ನಿಂತು ಹೋರಾಟ ಮಾಡುತ್ತೇವೆ ಎಂದರು.