Advertisement

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

10:53 PM Mar 14, 2024 | Team Udayavani |

ರಾಯಚೂರು: ನೀವು ಕೊಟ್ಟ ಶಕ್ತಿಯಿಂದಲೇ ನಾವು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಯಿತು. ರಾಜ್ಯದಲ್ಲಿ ಇನ್ನೂ ಒಂಬತ್ತು ವರ್ಷ ಕಾಂಗ್ರೆಸ್‌ ಸರಕಾರವೇ ಅ ಧಿಕಾರದಲ್ಲಿರುತ್ತದೆ. ಬಿಜೆಪಿ, ಜೆಡಿಎಸ್‌ ಮರೆತು ಬಿಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಗಣೇಕಲ್‌ ಲಿಂಕ್‌ ಕಾಲುವೆ ಯೋಜನೆ ಉದ್ಘಾ

ಟನೆ, ವಿವಿಧ ಇಲಾಖೆಗಳ 501 ಕೋ. ರೂ. ವೆಚ್ಚದ 54 ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಭೋಸರಾಜು, ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌, ಪರಿಸರದ ಶಾಸಕರು  ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next