Advertisement

ಕಾರ್ಯಕರ್ತರ ನೇರ ಸಂಪರ್ಕಕ್ಕೆ ಕಾಂಗ್ರೆಸ್‌ ಶಕ್ತಿ ಯೋಜನೆ

07:00 AM Jul 28, 2018 | Team Udayavani |

ಬೆಂಗಳೂರು:ಲೋಕಸಭೆ ಚುನಾವಣೆಗೆ ತಳ ಮಟ್ಟದಿಂದ ಪಕ್ಷವನ್ನು ಬಲಪಡಿಸಲು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಲು ಶಕ್ತಿ ಯೋಜನೆ ಜಾರಿಗೆ ಮುಂದಾಗಿದೆ.

Advertisement

ಪ್ರತಿಯೊಂದು ಜಿಲ್ಲೆ, ತಾಲೂಕು, ಗ್ರಾಮ ಹಾಗೂ ಬೂತ್‌ ಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಹೊಂದಲು ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ. 

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ಮೊಬೈಲ್‌ನಿಂದ 7045006100 ನಂಬರ್‌ಗೆ ತಮ್ಮ ಓಟರ್‌ ಐಡಿ ನಂಬರನ್ನು ಎಸ್‌ಎಂಎಸ್‌ ಕಳುಹಿಸುವ ಮೂಲಕ ಶಕ್ತಿ ಯೋಜನೆಗೆ ಸೇರಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಪಕ್ಷದ ಉನ್ನತ ಮಟ್ಟದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳನ್ನು ಕಾರ್ಯಕರ್ತರಿಗೆ ನೇರವಾಗಿ ಕಳುಹಿಸಲು ಅವಕಾಶ ಕಲ್ಪಿಸಲಾಗಿದೆ.ಅಲ್ಲದೇ ಕಾರ್ಯಕರ್ತರು ಪಕ್ಷದ ಸಂಘಟನೆ ಹಾಗೂ ತಮ್ಮ ಸಲಹೆಗಳನ್ನು ನೇರವಾಗಿ ಹೈ ಕಮಾಂಡ್‌ಗೆ ತಿಳಿಸಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next